ಬೆಂಗಳೂರು: ಚುನಾವಣೆ ಸಮಯದಲ್ಲಿ ತಮ್ಮ ವಿಡಿಯೋ ಡೀಪ್ ಫೇಕ್ ಮಾಡಲಾಗಿದೆ ಎಂದು ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಆಪಾದಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಈ ಸಂಬಂಧ ರಾಜ್ಯದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿರುವ ಅವರು, ಡೀಪ್ ಫೇಕ್ ಮೂಲಕ ಅಕ್ರಮವೆಸಗಿರುವ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಾನು ಮಾಡಿದ ಪ್ರಚಾರವನ್ನೇ ಈಗ ಮಾಡಿರುವಂತೆ ಬಿಂಬಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಬಿ.ವೈ.ರಾಘವೇಂದ್ರ ಅವರು ನನ್ನದು ಮತ್ತು ನರೇಂದ್ರಮೋದಿ ಅವರ ಭಾವಚಿತ್ರವಿರುವ ಫೇಕ್ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ದ್ರೋಹ ಎಂದರು.
ಈಗ ನಡೆದಿರುವ ಚುನಾವಣೆಗೂ, ಅವರು ಬಿಡುಗಡೆ ಮಾಡಿರುವ ವಿಡಿಯೋಗೂ ಸಂಬಂಧವಿಲ್ಲ. ನಾನು ಜೀವನದಲ್ಲಿ ಇಂತಹ ತಪ್ಪು ಮಾಡುವುದಿಲ್ಲ ಎಂದು ನಾನು ಹೇಳಿದ ಹಾಗೇ ಮಾಡಿದ್ದಾರೆ. ನಾನು ಬಿಜೆಪಿ ಕುಟುಂಬ ರಾಜಕಾರಣದಿಂದ ಹೊರಗೆ ಬರಬೇಕು, ಹಿಂದುತ್ವ ಪ್ರತಿಪಾದಿಸಿ ಸ್ಪರ್ಧಿಸಿದ್ದೆ ಎಂದರು.
ನನ್ನ ಸ್ಪರ್ಧೆಯಿಂದ ತಮ್ಮ ಸೋಲು ನಿಶ್ಚಿತ ಎಂದು ಭಾವಿಸಿದ ರಾಘವೇಂದ್ರ ಅವರು ಡೀಪ್ ಫೇಕ್ ವಿಡಿಯೋ ಮೂಲಕ ಚುನಾವಣಾ ಕಣದಿಂದ ಈಶ್ವರಪ್ಪ ಹಿಂದೆ ಸರಿದಿದ್ದಾರೆ. ನನಗೆ ಬೆಂಬಲಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದಾರೆ. ಇದು ಷಡ್ಯಂತ್ರ ಎಂದು ಕಿಡಿಕಾರಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು 6 ವರ್ಷ ಉಚ್ಚಾಟನೆ ಮಾಡಿದರು. ಬಳಿಕ ಯಡಿಯೂರಪ್ಪ ಅವರ ಮನೆಗೆ ಹೋಗಿ ಕರೆದುಕೊಂಡು ಬಂದು ಸೀಟು ಕೊಟ್ಟರು. ಈ ಉಚ್ಛಾಟನೆ ನಾನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ನಾನು ಮೋದಿ ಪರ ಕೈ ಎತ್ತುತ್ತೇನೆ. ರಾಘವೇಂದ್ರ ಲಿಂಗಾಯತರ ಹೆಸರಲ್ಲಿ ಓಟು ಕೇಳಿದರು. ಮಧು ಬಂಗಾರಪ್ಪ ಈಡಿಗರ ಹೆಸರಲ್ಲಿ ಓಟು ಕೇಳಿದರು. ಜಾತಿ ಹೆಸರಿನಲ್ಲಿ ಮತ ಕೇಳಿದ ಇವರಿಗೆ ನಾಚಿಕೆಯಾಗಬೇಕು ಎಂದರು.




