ಮಾನ್ಯ ಸೋಮಣ್ಣನವರು ಶ್ರೀ ಶಿವಕುಮಾರ ಸ್ವಾಮೀಜಿರವರ ಹೆಸರನ್ನು ಯಾವುದಾದರೂ ಒಂದು ಪ್ರಮುಖ ರೈಲಿಗೆ ನಾಮಕರಣ ಮಾಡಿ. ನಡೆದಾಡುವ ದೇವರು ಎಂಬ ಮಾತಿನೊಂದಿಗೆ ಕೋಟ್ಯಾಂತರ ಜನರ ಮನಸ್ಸಿನಲ್ಲಿ ಅಪಾರವಾದ ಭಕ್ತಿಯ ಆರಾಧ್ಯ ದೇವರಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಇವರ ಬಗ್ಗೆ ಅಪಾರವಾದಂತಹ ಗೌರವ ಮತ್ತು ಭಕ್ತಿಯನ್ನು ಹೊಂದಿರುವರು ತುಮಕೂರು ಲೋಕಸಭಾ ಕ್ಷೇತ್ರದ ಸದಸ್ಯರು ಮತ್ತು ವಿಶೇಷವಾಗಿ ಕೇಂದ್ರದ ರೈಲ್ವೆ ರಾಜ್ಯ ಸಚಿವರಾಗಿರುವ ಸೋಮಣ್ಣನವರು.
ಸೋಮಣ್ಣನವರು ಈಗಲಾದರೂ ತಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿರವರ ಹೆಸರುನ್ನು ಯಾವುದಾದರೂ ಒಂದು ಪ್ರಮುಖವಾದಂತಹ ರೈಲಿಗೆ ನಾಮಕರಣ ಮಾಡಬೇಕು. ಹಾಗೆ ಮಾಡಿದರೆ ಇದರಿಂದ ಕೋಟ್ಯಾಂತರ ಭಕ್ತರಿಗೆ ಸಂತೋಷವಾಗುತ್ತದೆ ಮತ್ತು ಇವರ ಹಿರಿಮೆಯನ್ನ ಮತ್ತಷ್ಟು ಜನರಿಗೆ ಮುಟ್ಟಿಸಿದಂತಾಗುತ್ತದೆ. ಇವರಿಗೆ ಭಾರತರತ್ನ ಗೌರವವೂ ದೊರೆತಿಲ್ಲ. ಈಗಲಾದರೂ ಮಾನ್ಯ ಸೋಮಣ್ಣನವರು ಪ್ರಮುಖವಾದ ರೈಲಿಗೆ ಇವರ ಹೆಸರನ್ನು ನಾಮಕರಣ ಮಾಡಿ ಮಾಡಿ ಪದೇಪದೇ ಇವರ ಹೆಸರನ್ನು ಸ್ಮರಿಸಿಕೊಳ್ಳುವಂತೆ ಮಾಡಬೇಕೆಂದು ಕೋರಿಕೊಳ್ಳುತ್ತೇನೆ.
– ಕೆ ಎಸ್ ನಾಗರಾಜ್, ಬೆಂಗಳೂರು




