ಬೆಂಗಳೂರು: ಈಶಾನ್ಯ ರಾಜ್ಯಗಳ ಮೂಲಕ ದೇಶದೊಳಗೆ ನುಸುಳಿರುವ ಬಾಂಗ್ಲಾದೇಶದ ಪ್ರಜೆಗಳು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಮಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ನೆಲೆಸಿದ್ದು ಇವರು ನಿಷೇಧಿತ ಉಗ್ರ ಸಂಘಟನೆ ಅಲ್ ಖೈದಾ ಜೊತೆನಂಟು ಹೊಂದಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಕರ್ನಾಟಕ ಸೇರಿ ದೇಶದ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಟ್ಟಡ ನಿರ್ಮಾಣ, ಹೋಟೆಲ್, ತೋಟಗಳ ಕಾರ್ಮಿಕರು ಸೇರಿದಂತೆ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವ ಇವರು ನಕಲಿ ಆಧಾರ್ ಕಾರ್ಡ್ ಗಳನ್ನು ಮಾಡಿಸಿಕೊಂಡು ನೆಲೆಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತ ಖಚಿತ ಮಾಹಿತಿ ಆಧಾರದ ಮೇಲೆ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ, ತ್ರಿಪುರಾ ಸೇರಿ ಒಂಭತ್ತು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆಯನ್ನು ಎನ್ ಐಎ ಅಧಿಕಾರಿಗಳು ಕೈಗೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು ವಿವರ, ಮೊಬೈಲ್ ಫೋನ್, ಲ್ಯಾಪ್ಟಾಪ್ ಬಳಸಿ ಮಾಡುವ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.




