ಬೆಂಗಳೂರು: ಹೊಸ ಜಿಲ್ಲೆ ಅಥವಾ ತಾಲೂಕುಗಳನ್ನು ರಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಂಗಳವಾರ ಗಮನ ಸೆಳೆಯುವ ಸೂಚನೆಯಲ್ಲಿ ಮಾತನಾಡಿದ ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ ಪಾಟೀಲ್ ಅವರು ತಮ್ಮ ಕ್ಷೇತ್ರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಈ ವೇಳೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ, ಜನಗಣತಿ ಸಂದರ್ಭದಲ್ಲಿ ಯಾವ ರಾಜ್ಯಗಳೂ ಹೊಸ ಕಂದಾಯ ಜಿಲ್ಲೆ ಘೋಷಿಸಬಾರದು ಎಂದು ಕೇಂದ್ರ ಸರ್ಕಾರದ ನಿಯಮವಿದೆ. ಅಲ್ಲದೆ ರಾಜ್ಯ ಸರ್ಕಾರದ ಮುಂದೆಯೂ ಯಾವುದೇ ಹೊಸ ಜಿಲ್ಲೆ ಅಥವಾ ತಾಲೂಕು ರಚನೆಯ ಪ್ರಸ್ತಾವನೆ ಇಲ್ಲ ಎಂದರು.
ಮುಂದುವರೆದು, ಒಂದೆರಡು ತಾಲೂಕುಗಳಿಂದ ಜಿಲ್ಲಾ ಕೇಂದ್ರ ರಚನೆಯ ಕೋರಿಕೆ ಇದೆ. ಭವಿಷ್ಯದಲ್ಲಿ ಇಂತಹ ಸಾಧ್ಯತೆ ಎದುರಾದರೆ ಖಂಡಿತ ಇಂಡಿ ತಾಲೂಕನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.




