ಬೆಂಗಳೂರು: ರಾಜ್ಯ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ವರ್ಗೀಕರಣ ಮಾಡಲಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಿ ಆಂಧ್ರ, ಆದಿ ಕರ್ನಾಟಕ, ಆದಿ ದ್ರಾವಿಡ ಅಂತ ಇತ್ತು. ಅದನ್ನು ಇವರು ತಿರಸ್ಕರಿಸಿದರು. ಎಕೆ, ಎಡಿ, ಎಎ ಯಾವುದೇ ಗುಂಪಿಗೆ ಸೇರಲಿಲ್ಲ. ಅವರು ಪ್ರವರ್ಗ ಎ, ಪ್ರವರ್ಗ ಬಿ, ದಲ್ಲಿ ಸೇರಿ ಅಂತ ಹೇಳಿ ಅವರನ್ನು ಎಲ್ಲಿಯೂ ಸೇರದಂತೆ ಮಾಡಿದರು ಎಂದರು.
ಅಲೆಮಾರಿಗಳು ಅತ್ಯಂತ ಕನಿಷ್ಠ ಜೀವನ ಸ್ಥಿತಿಯಲ್ಲಿದ್ದಾರೆ. ಅವರಿಗೆ ಯಾವುದೇ ಮೀಸಲಾತಿ ಇಲ್ಲ. ರಾಜ್ಯ ಸರ್ಕಾರದ ಒಳ ಮೀಸಲಾತಿಯಿಂದ ಯಾರೂ ಸಂತುಷ್ಠರಿಲ್ಲ ಎಂದರು.
ಎಸ್ಸಿ ಬಲಗೈ ಸಮುದಾಯದವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಲಂಬಾಣಿ ಬೋವಿ ಜೊತೆಗೆ 59 ಜಾತಿಗಳನ್ನು ಸೇರಿಸಿದ್ದಾರೆ. ಸರ್ಕಾರದ ಬಳಿ ಹೋದರೆ ನಾವು ರಾಜಕೀಯ ನಿರ್ಣಯ ಕೈಗೊಂಡಿದ್ದೇವೆ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಅಂತ ಹೇಳುತ್ತಿದ್ದಾರೆ. ಮತ್ತೆ ಬಗೆಹರಿಯದ ಕಗ್ಗಂಟಾಗಿ ಮಾಡುತ್ತಿದ್ದಾರೆ ಎಂದರು.




