ಬೆಂಗಳೂರು: “ನಾವೇನು 5, 6 ಸೀಟು ಕೇಳುತ್ತಿದ್ದೇವಾ, 3 ಕ್ಷೇತ್ರ ಕೇಳುತ್ತಿದ್ದೇವೆ ಅಷ್ಟೇ, 2 ಕ್ಷೇತ್ರ ಪಡೆಯುವುದಕ್ಕೆ ಬಿಜೆಪಿಯವರ ಹತ್ತಿರ ಬರಬೇಕಿತ್ತಾ“ ಎಂದು ಕುಮಾರಸ್ವಾಮಿಯವರು ಗೋಳಾಡುತ್ತಿದ್ದಾರೆ ಎಂದು ಕೆಪಿಸಿಸಿ ಹೇಳಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ, ತಮ್ಮ ಕುಟುಂಬ ಸದಸ್ಯರಿಗೆ ಮಾತ್ರ ಕ್ಷೇತ್ರ ಭದ್ರಪಡಿಸಿಕೊಳ್ಳಲು ಹೋರಾಡುತ್ತಿರುವ H D Kumaraswamy ಅವರು ತಮ್ಮ ಪಕ್ಷದ ಇತರ ನಾಯಕರ ಕುರಿತು ಯೋಚಿಸುವುದುಂಟೇ! ಎಂದಿದೆ.
ಇವರು ಕೇಳುತ್ತಿರುವ 3 ಕ್ಷೇತ್ರ ತಮ್ಮ ಫ್ಯಾಮಿಲಿಗೆ ಮಾತ್ರ, ಕಾರ್ಯಕರ್ತರು, ಇತರ ನಾಯಕರು ರಾಜಕೀಯ ಸನ್ಯಾಸ ಸ್ವೀಕರಿಸುವುದೇ ಉತ್ತಮ. ಜೆಡಿಎಸ್ ನಂಬಿಕೊಂಡಿರುವ ಕಾರ್ಯಕರ್ತರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ ಎನ್ನುವುದು ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬದಷ್ಟೇ ಸತ್ಯ ಎಂದಿದೆ.




