ಜೆಡಿಎಸ್ ನಂಬಿಕೊಂಡಿರುವ ಕಾರ್ಯಕರ್ತರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ: ಕೆಪಿಸಿಸಿ

2 years ago

ಬೆಂಗಳೂರು: “ನಾವೇನು 5, 6 ಸೀಟು ಕೇಳುತ್ತಿದ್ದೇವಾ, 3 ಕ್ಷೇತ್ರ ಕೇಳುತ್ತಿದ್ದೇವೆ ಅಷ್ಟೇ, 2 ಕ್ಷೇತ್ರ ಪಡೆಯುವುದಕ್ಕೆ ಬಿಜೆಪಿಯವರ ಹತ್ತಿರ ಬರಬೇಕಿತ್ತಾ“ ಎಂದು ಕುಮಾರಸ್ವಾಮಿಯವರು ಗೋಳಾಡುತ್ತಿದ್ದಾರೆ ಎಂದು ಕೆಪಿಸಿಸಿ ಹೇಳಿದೆ.

ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ, ತಮ್ಮ ಕುಟುಂಬ ಸದಸ್ಯರಿಗೆ ಮಾತ್ರ ಕ್ಷೇತ್ರ ಭದ್ರಪಡಿಸಿಕೊಳ್ಳಲು ಹೋರಾಡುತ್ತಿರುವ H D Kumaraswamy ಅವರು ತಮ್ಮ ಪಕ್ಷದ ಇತರ ನಾಯಕರ ಕುರಿತು ಯೋಚಿಸುವುದುಂಟೇ! ಎಂದಿದೆ.

ಇವರು ಕೇಳುತ್ತಿರುವ 3 ಕ್ಷೇತ್ರ ತಮ್ಮ ಫ್ಯಾಮಿಲಿಗೆ ಮಾತ್ರ, ಕಾರ್ಯಕರ್ತರು, ಇತರ ನಾಯಕರು ರಾಜಕೀಯ ಸನ್ಯಾಸ ಸ್ವೀಕರಿಸುವುದೇ ಉತ್ತಮ. ಜೆಡಿಎಸ್ ನಂಬಿಕೊಂಡಿರುವ ಕಾರ್ಯಕರ್ತರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ ಎನ್ನುವುದು ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬದಷ್ಟೇ ಸತ್ಯ ಎಂದಿದೆ.

Leave a Reply