ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು.
ಈಗಾತಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದರು.
ಗೃಹಲಕ್ಷ್ಮಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದರು.
ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು.




