ಬೆಳಗಾವಿ: 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯ ನಡೆಸಿದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸಮರ್ಥಿಸಿಕೊಂಡಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರತಿಭಟನಕಾರ ಮೇಲೆ ಏಕಾಏಕಿ ವಿನಾಕಾರಣ ನಾವು ಲಾಠಿಚಾರ್ಜ್ ಮಾಡಿಲ್ಲ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವಿಡಿಯೋ ಹಾಗೂ ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಃ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದಾಗಲೂ ಒಪ್ಪಲಿಲ್ಲ ಎಂದರು.
ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ, ಕಲ್ಲು ಎಸೆದರು. ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ ಆಗಿತ್ತು ಎಂದರು.
ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೀಗೆ ಅವಕಾಶ ನೀಡಿದರೆ, ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿಯಮ ಉಲ್ಲಂಘನೆಯಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಎಲ್ಲರೂ ಉಲ್ಲಂಘಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ದಾಖಲೆಗಳಿವೆ ಎಂದರು.




