ಬೆಳಗಾವಿ: 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯ ನಡೆಸಿದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸಮರ್ಥಿಸಿಕೊಂಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರತಿಭಟನಕಾರ ಮೇಲೆ ಏಕಾಏಕಿ ವಿನಾಕಾರಣ ನಾವು ಲಾಠಿಚಾರ್ಜ್ ಮಾಡಿಲ್ಲ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವಿಡಿಯೋ ಹಾಗೂ ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಃ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದಾಗಲೂ ಒಪ್ಪಲಿಲ್ಲ ಎಂದರು.
ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ, ಕಲ್ಲು ಎಸೆದರು. ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ ಆಗಿತ್ತು ಎಂದರು.
ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೀಗೆ ಅವಕಾಶ ನೀಡಿದರೆ, ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿಯಮ ಉಲ್ಲಂಘನೆಯಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಎಲ್ಲರೂ ಉಲ್ಲಂಘಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ದಾಖಲೆಗಳಿವೆ ಎಂದರು.




