ಬೆಳಗಾವಿ: 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯ ನಡೆಸಿದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸಮರ್ಥಿಸಿಕೊಂಡಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪ್ರತಿಭಟನಕಾರ ಮೇಲೆ ಏಕಾಏಕಿ ವಿನಾಕಾರಣ ನಾವು ಲಾಠಿಚಾರ್ಜ್ ಮಾಡಿಲ್ಲ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವಿಡಿಯೋ ಹಾಗೂ ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಃ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದಾಗಲೂ ಒಪ್ಪಲಿಲ್ಲ ಎಂದರು.
ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ, ಕಲ್ಲು ಎಸೆದರು. ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ ಆಗಿತ್ತು ಎಂದರು.
ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೀಗೆ ಅವಕಾಶ ನೀಡಿದರೆ, ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿಯಮ ಉಲ್ಲಂಘನೆಯಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಎಲ್ಲರೂ ಉಲ್ಲಂಘಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ದಾಖಲೆಗಳಿವೆ ಎಂದರು.




