ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ: ರಾಮಲಿಂಗಾರೆಡ್ಡಿ

1 year ago

ಬೆಂಗಳೂರು: ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 

“ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆ ತುಸು ಕಷ್ಟವಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ” ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಈ ವರದಿಗಳನ್ನು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದು ಮಾಧ್ಯಮಗಳ ನಡೆಯನ್ನು ಖಂಡಿಸಿದ್ದಾರೆ.

ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ. ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ  ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಲು ಕೋರಿದ್ದಾರೆ.

Leave a Reply