ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ ಗೆ ಹೆಚ್ಚಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರಗಳಲ್ಲಿ ಪ್ರವಾಹವಾಗುತ್ತದೆ ಎಂಬ ಮಹಾರಾಷ್ಟ್ರದ ಆಕ್ಷೇಪಣೆಗೆ ಯಾವುದೇ ತಾತ್ವಿಕ ಆಧಾರವಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟೆ ನಿರ್ಮಾಣಕ್ಕೂ ಮುನ್ನವೇ ಸಾಂಗ್ಲಿ ಭಾಗದಲ್ಲಿ ಪ್ರವಾಹ ಸಂಭವಿಸುತ್ತಿತ್ತು ಎಂಬುದು ದಾಖಲೆಗಳಿಂದ ಸಾಬೀತಾಗಿದೆ. ಅಣೆಕಟ್ಟೆ ಎತ್ತರವನ್ನು ವಿರೋಧಿಸಿ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನ್ಯಾಯಾಧೀಕರಣ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದರೂ, ಅವು ತಿರಸ್ಕೃತಗೊಂಡಿವೆ ಎಂದರು.
ನದಿ ನೀರಿನ ನಮ್ಮ ಹಕ್ಕುಗಳಿಗಾಗಿ ಕರ್ನಾಟಕ ಸದಾ ಹೋರಾಡುತ್ತದೆ ಮತ್ತು ಸೂಕ್ತ ಹಂತಗಳಲ್ಲಿ ತನ್ನ ನಿಲುವು ಸ್ಪಷ್ಟವಾಗಿ ಸ್ಥಾಪಿಸುತ್ತದೆ ಎಂದರು.




