ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿಕೆ
ದಾವಣಗೆರೆ:ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು, ಇದರಿಂದ ಮಳೆಗಾಲ ಸೇರಿ ಬೇಸಿಗೆ ಬೆಳೆಗೆ ನೀರು ಖಾತರಿಯಾಗಿದೆ. ಭದ್ರಾ ಜಲಾಶಯದಿಂದ ಎಲ್ಲಾ ರೈತರ ಒಳಿತಿಗಾಗಿ ಬಾಗಿನ ಅರ್ಪಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಭದ್ರಾ ಜಲಾಶಯದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ, ಬಸವರಾಜ್ ವಿ.ಶಿವಗಂಗಾ, ಲತಾ ಮಲ್ಲಿಕಾರ್ಜುನ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಬಾಗಿನ ಸಮರ್ಪಣೆ ಮಾಡಿ ಮಾತನಾಡಿದ ಅವರು, ಭದ್ರಾ ಮಧ್ಯ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ ಮತ್ತು ತುಂಗಭದ್ರಾ ನದಿ ಮೂಲಕ ಈ ನೀರು ಹೊಸಪೇಟೆ ಜಲಾಶಯ ಸೇರಲಿದೆ, ಇವೆರಡು ಜಿಲ್ಲೆಯ ಜೀವನಾಡಿಯಾಗಿವೆ. ಜಲಾಶಯ ಭರ್ತಿಯಿಂದ ಒಳ್ಳೆಯ ಬೆಳೆಯಾಗಿ ಇದಕ್ಕೆ ಸೂಕ್ತ ಬೆಲೆಯು ರೈತರಿಗೆ ಸಿಗಲಿ ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಭದ್ರಾ ಅಧೀಕ್ಷಕ ಎಂಜಿನಿಯರ್ ಸುಜಾತಾ ಸೇರಿದಂತೆ ಅನೇಕ ರೈತ ಮುಖಂಡರು, ಸಹಸ್ರಾರು ರೈತರು ಹಾಜರಿದ್ದರು.



