ಮೈಸೂರು: ಬೃಹತ್ ರೋಡ್ ಶೋ ಮೂಲಕ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸದ ವಿಜಯೇಂದ್ರ ಯಡಿಯೂರಪ್ಪ ಮತ್ತೊಮ್ಮೆ ಮೋದಿ ಜಯಘೋಷ ಮೂಡಿಸುತ್ತಿದೆ ವಿಜಯದ ವಿಶ್ವಾಸ ಎಂದು ಹೇಳಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ

ನಾಡಿಗೆ ಅಗ್ರಮಾನ್ಯ ಕೊಡುಗೆ ನೀಡಿರುವ ಶ್ರೇಷ್ಠ ಮನೆತನದ ಮಾನ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಮತ್ತೊಮ್ಮೆ ಮೋದಿ ಮಹಾ ಸಂಕಲ್ಪ ಸಾಕಾರಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ಸಂಘಟನೆಗೊಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಉತ್ಸಾಹ ಐತಿಹಾಸಿಕ ಗೆಲುವಿನ ಮುನ್ಸೂಚನೆ ನೀಡಿತು ಎಂದರು.


ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೆಗೌಡ, ಪ್ರಮೋದಾದೇವಿ ಒಡೆಯರ್, ಸಂಸದರಾದ ವಿಜಯ್ ಶಂಕರ್, ಶಾಸಕರಾದ ಟಿ.ಎಂ.ಶ್ರೀವತ್ಸ, ಜಿ.ಟಿ ಹರೀಶ್ ಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.




