ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ನವೀಕರಣ ಮತ್ತು ಹೊನಲು-ಬೆಳಕಿನ ದೀಪದ ವ್ಯವಸ್ಥೆ ಕಾಮಗಾರಿ, ಡಾಂಬರೀಕರಣ ಕಾಮಗಾರಿ ಹಾಗೂ ಬೋರ್ ವೆಲ್ ಕೊರೆಸುವ ಕಾಮಗಾರಿ, ನಾಮಫಲಕ ಆಳವಡಿಕೆ ಕಾಮಗಾರಿಗಳ ಗುದ್ದಲಿಪೂಜೆಯನ್ನು ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ನೇರವೇರಿಸಿದರು.
ಬಿಬಿಎಂಪಿ ಮಾಜಿ ಸದಸ್ಯ ಎಂ.ಮುನಿರಾಜು, ಮತ್ತು ಮಂಡಲ ಅಧ್ಯಕ್ಷ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಂಜಯ್ ಕುಮಾರ್ ಉಪಸ್ಥಿತರಿದ್ದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ಮಾತನಾಡಿ, ಸಾರ್ವಜನಿಕರ ಆಶಯದಂತೆ ಕಾಮಗಾರಿಗಳ ಅನುಷ್ಠಾನ, ತೆರಿಗೆ ಹಣ ಸಮರ್ಪಕ ಬಳಕೆ ಉದ್ದೇಶದಿಂದ ಕಾಮಗಾರಿಗಳ ಅನುಷ್ಠಾನ ಮಾಡಲಾಗುತ್ತಿದೆ. ಕಳೆದ 35 ವಾರಗಳಿಂದ ಜನರೊಂದಿಗೆ ಜನಸೇವಕ ಕಾರ್ಯಕ್ರಮದಿಂದ ಸಾರ್ವಜನಿಕರ ಸಾವಿರಾರು ಸಮಸ್ಯೆಗಳ ಪರಿಹಾರ ಸಿಕ್ಕಿದೆ. ಇದೀಗ ದಿನಕ್ಕೊಂದು ವಾರ್ಡ್ ಅಭಿಯಾನ ಆರಂಭಿಸಲಾಗಿದೆ. ಪ್ರತಿ ದಿನ ಒಂದೊಂದು ವಾರ್ಡ್ ಗಳಿಗೆ ಭೇಟಿ ಮಾಡಿ ಸಾರ್ವಜನಿಕ ಸಮಸ್ಯೆಗಳ ಸಮಸ್ಯೆಗಳನ್ನು ಅಲಿಸಲಾಗುತ್ತಿದೆ ಎಂದರು.
ದಯಾನಂದನಗರ ವಾರ್ಡ್ ಬಿಜೆಪಿ ಪ್ರಮುಖ ಮುಖಂಡರು, ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು.









