ಶಿವಮೊಗ್ಗ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ – ವಿಜಯಪುರ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಅಕ್ಕಮಹಾದೇವಿ ಸಂಶೋಧನೆ, ಕೌಶಲ್ಯ ಅಭಿವೃದ್ಧಿ ಮತ್ತು ವಿಸ್ತರಣಾ ಕೇಂದ್ರ-ಉಡುತಡಿಯಲ್ಲಿ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷಕ್ಕೆ ಅರ್ಹ ವಿದ್ಯಾರ್ಥಿನಿಯರಿಂದ ಕರ್ನಾಟಕ ಸರ್ಕಾರದ ಯು.ಯು.ಸಿ.ಎಂ.ಎಸ್. ತಂತ್ರಾಂಶದ ಮೂಲಕ ನಿಗದಿತ ನಮೂನೆಯಲ್ಲಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಸಕ್ತರು http://uucms.karnataka.gov.in/login/index ಮೂಲಕ ಅಕ್ಟೋಬರ್ 20ರೊಳಗಾಗಿ ಸಲ್ಲಿಸಿ, ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ಸ್ನಾತಕೋತ್ತರ ಕೇಂದ್ರ –ಉಡುತಡಿ ಕಚೇರಿಗೆ ಅಕ್ಟೋಬರ್ 21ರೊಳಗಾಗಿ ಸಲ್ಲಿಸುವಂತೆ ವಿವಿಯ ಪ್ರಾಧ್ಯಾಪಕ ಮತ್ತು ವಿಶೇಷಾಧಿಕಾರಿ ಡಾ. ಪ್ರಶಾಂತ್ ಎಸ್.ಜೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರು ಪ್ರವೇಶ ಪಡೆಯಲು ಕೌನ್ಸಿಲಿಂಗ್ಗೆ ಹಾಜರಾಗಿ ಮೆರಿಟ್ ಆಧಾರದಲ್ಲಿ ಪ್ರವೇಶವನ್ನು ಪಡೆದುಕೊಳ್ಳಬಹುದಾಗಿದ್ದು, ಕೌನ್ಸಿಲಿಂಗ್ ದಿನಾಂಕವನ್ನು ನಂತರ ವಿವಿಯ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.ನಂ.: 9986297957/8050465623/ 9902993981/ 7349139105 ಅಥವಾ ವೆಬ್ಸೈಟ್ https://www.kswu.ac.in ಗಳನ್ನು ಸಂಪರ್ಕಿಸಬಹುದು.




