ಸಿರುಗುಪ್ಪ: ಫೆ.20 ರಂದು ಅಕ್ಕಿ ಬಹಿರಂಗ ಹರಾಜು
ಬಳ್ಳಾರಿ: ಸಿರುಗುಪ್ಪ ತಾಲ್ಲೂಕಿನ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಜಂಟಿ ತಂಡ ಒಟ್ಟು 26 ವಿವಿಧ ಪ್ರಕರಣಗಳಲ್ಲಿ ಅಕ್ರಮ ಪಡಿತರ ದಾಸ್ತಾನು ಹಾಗೂ ಅಕ್ರಮ ಪಡಿತರ ಧಾನ್ಯ ಸಾಗಾಣಿಕೆ/ದಾಸ್ತಾನನ್ನು ಜಪ್ತು ಮಾಡಿದ ಒಟ್ಟು 701.95 ಕ್ವಿಂಟಾಲ್ ಅಕ್ಕಿಯನ್ನು ಸಿರುಗುಪ್ಪ ಪಟ್ಟಣದ ಎಪಿಎಂಸಿ ಆವರಣದ ಕೆಎಫ್ಸಿಎಸ್ಸಿ ಸಗಟು ಗೋದಾಮಿನಲ್ಲಿ ಫೆ.20 ರಂದು ವಿವಿಧ ಷರತ್ತಿಗೊಳಪಟ್ಟು ಬಹಿರಂಗ ಹರಾಜು ಮಾಡಲಾಗುವುದು ಎಂದು ಸಿರುಗುಪ್ಪ ತಹಶೀಲ್ದಾರರು ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಭದ್ರತಾ ಠೇವಣಿ ನೀಡಿ ನೋಂದಾಯಿಸಿಕೊಂಡವರಿಗೆ ಮಾತ್ರ ಹರಾಜಿನಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಆಸಕ್ತಿಯುಳ್ಳ ಬಿಡ್ದಾರರು ರೂ.1,50,000/-ಗಳನ್ನು ತಹಶೀಲ್ದಾರರು, ಸಿರುಗುಪ್ಪ ಇವರ ಹೆಸರಲ್ಲಿ ಮುಂಗಡ ಭದ್ರತಾ ಠೇವಣಿ ತೆಗೆದುಕೊಂಡು ಸಿರುಗುಪ್ಪ ಆಹಾರ ನಿರೀಕ್ಷಕರಾದ ಮಹಾರುದ್ರ ಗೌಡ (ಮೊ.9986415163) ಹಾಗೂ ವಿಜಯ ಕುಮಾರ್(ಮೊ.9449738127) ಇವರ ಬಳಿ ನೋಂದಾಯಿಸಿಕೊಂಡು ಸ್ವೀಕೃತಿ ಪಡೆದುಕೊಳ್ಳಬೇಕು.
ಫೆ.17 ಸಂಜೆ 05.03 ರೊಳಗೆ ನೋಂದಾಯಿಸಿಕೊಳ್ಳಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ತಾಲೂಕು ಕಚೇರಿ (ಆಹಾರ ಶಾಖೆ)ಗೆ ಸಂಪರ್ಕಿಸಬಹುದು.




