ಬೆಂಗಳೂರು: ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆಯ ಫಲಿತಾಂಶದ ಮೂಲಕ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯುವುದಿಲ್ಲ. ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ ಎಂದರು.
ವಿರೋಧ ಪಕ್ಷಗಳ ನಾಯಕರು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೇಲೆ ದೊಡ್ಡ ಚರ್ಚೆ ಮಾಡುತ್ತಿದ್ದರು, ಅಭಿವೃದ್ಧಿಗೆ ಹಣವಿಲ್ಲ ಎಂದರು. ಈ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, 224 ಕ್ಷೇತ್ರಗಳಿಗೆ ಈ ಹಣ ಹಂಚಿದರೆ ಪ್ರತಿ ಕ್ಷೇತ್ರಕ್ಕೆ ಸರಾಸರಿ 250 ಕೋಟಿ ಪ್ರತಿ ವರ್ಷ ನೀಡಲಾಗುತ್ತಿದೆ. ಇದು ಅಭಿವೃದ್ಧಿ, ಜನರ ಬದುಕಿಗಾಗಿ ನೀಡುತ್ತಿರುವ ಹಣವಲ್ಲವೇ? ಬಡ ಮತ್ತು ಮಧ್ಯಮದ ವರ್ಗದ ಜನರಿಗೆ ಆರ್ಥಿಕ ಶಕ್ತಿ ಸಿಕ್ಕಿಲ್ಲವೇ? ಈ ಯೋಜನೆ ಜಾರಿಯಲ್ಲಿ ಯಾವುದಾದರೂ ಅಕ್ರಮ ನಡೆದಿದೆಯೇ? ಇದೆಲ್ಲವನ್ನು ಅರಿತು ಜನರೇ ತೀರ್ಪು ನೀಡಿದ್ದಾರೆ ಎಂದರು.




