ಉತ್ತರ ಕನ್ನಡ: ಜನಪದ ಕೋಗಿಲೆ ಎಂದೇ ಹೆಸರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನಾಡೋಜ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
2017ರಲ್ಲಿ ಜನಪದ ಹಾಡುಗಳ ಗಾಯನ ಸಾಧನೆಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತ್ತು. ಇವರು ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದರು.
ವಯೋಸಹಜ ಅನಾರೋಗ್ಯದಿಂದ ಇತ್ತೀಚೆಗೆ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರಿಗೆ ಕೆಲ ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಇಂದು ಮುಂಜಾನೆ ಕಾಲವಶರಾದರು. ಅವರು ಇಬ್ಬರು ಮೊಮ್ಮೊಕ್ಕಳು, ಒಬ್ಬ ಸೊಸೆಯನ್ನು ಅಗಲಿ ಹೋಗಿದ್ದಾರೆ.




