ಕರ್ನಾಟಕ ಲೋಕಸೇವಾ ಆಯೋಗದಿಂದ ಪರೀಕ್ಷೆ
ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 7 ಮತ್ತು 8 ರಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪರೀಕ್ಷೆ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡದೆ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.7 ರಂದು ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ 9198 ಅಭ್ಯರ್ಥಿಗಳು ಮತ್ತು ಡಿ.8 ರಂದು 27 ಪರೀಕ್ಷಾ ಕೇಂದ್ರಗಳಲ್ಲಿ 11749 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ ಎಂದರು.
ಡಿ.7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಡಿ.8 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯದ ಕುರಿತು ಪರೀಕ್ಷೆ ಇರುತ್ತದೆ. ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಎರಡು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್ಗರಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಮತ್ತು ಡ್ರೆಸ್ಕೋುಡ್ ಅನುಸರಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ, ಹಾಜರಿದ್ದರು.




