ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದೆಹಲಿಯಲ್ಲಿ ಮೂವತ್ತು ವರ್ಷದ ನಂತರ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್ ಗೆ ಬೆಂಬಲಿಸಿದ್ದರು. ಆದರೆ, ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದಾರೆ. ಇನ್ನೊಂದೆಡೆ ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ. ಆಪ್ ಪ್ರತಿಯೊಂದರಲ್ಲೂ ಸುಳ್ಳು ಹೇಳುವುದು, ಹಲವಾರು ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ತಾವು ಮಾಡದಿರುವ ಕೆಲಸಕ್ಕೆ ಬೇರೆಯವರನ್ನು ದೂಷಿಸುತ್ತಿದ್ದರು. ರಸ್ತೆ, ಕುಡಿಯುವ ನೀರು ಕೊಡಲು ಆಗಿಲ್ಲ. ಆಯುಷ್ಮಾನ್ ಯೋಜನೆ ಜಾರಿಗೊಳಿಸದಿರುವುದು ಬಡವರಿಗೆ ಬೇಸರ ತರಿಸಿದೆ.
ಕಾಂಗ್ರೆಸ್ ಬರೇ ಘೊಷಣೆ ಮೂಲಕ ಅಧಿಕಾರ ನಡೆಸಲು ಸಾಧ್ಯವಿಲ್ಲ. ಈಗ 21ಶತಮಾನದಲ್ಲಿ ಯುವಕರು ಎಲ್ಲವನ್ನೂ ಗಮನಿಸುತ್ತಾರೆ. ಕಾಂಗ್ರೆಸ್ ಕೇವಲ ಘೋಷಣೆ ಮಾಡುವುದರಿಂದ ಜನರ ಮನಸ್ಸು ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಸಾಮಾನ್ಯರ ಭಾವನೆ ಅರ್ಥ ಮಾಡಿಕೊಳ್ಳಬೇಕು.
ದೆಹಲಿ ಒಂದು ನಗರದ ರಾಜ್ಯ, ಹೊರ ವಲಯದಲ್ಲಿರುವ ರೈತರು, ಹರಿಯಾಣದ ಜಾಟರು, ಪಂಜಾಬಿನ ಜನರು, ಉತ್ತರ ಪ್ರದೇಶ, ಬಿಹಾರದಿಂದ ಬಂದಿರುವ ದುಡಿಯುವ ವರ್ಗ, ಹಲವಾರು ಅಲ್ಪ ಸಂಖ್ಯಾತ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ರಾಷ್ಟ್ರೀಯ ತೆ ನಂಬಿರುವ ಅಲ್ಪ ಸಂಖ್ಯಾತರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.
ಈ ಚುನಾವಣೆಯ ಒಟ್ಟು ಪರಿಣಾಮ ಹರಿಯಾಣ ಮಹಾರಾಷ್ಟ್ರ, ದೆಹಲಿ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯನ್ನು ಶಕ್ತಿಯುತವಾಗಿ ಮಾಡಿರುವುದು, ಇಂಡಿ ಒಕ್ಕೂಟದಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗಲಿದೆ. ಆಪ್ ನವರು ತಮ್ಮನ್ನು ಸೋಲಿಸಲು ಕಾಂಗ್ರೆಸ್ ಪ್ರಯತ್ನ ಪಟ್ಟಿತ್ತು ಅಂತ ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಇಂಡಿ ಒಕ್ಕೂಟದಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗುತ್ತದೆ.
– ಬಸವರಾಜ ಬೊಮ್ಮಾಯಿ, ಸಂಸದ




