#ಧರ್ಮಸ್ಥಳಫೈಲ್ಸ್
ನೂರಾರು ಹೆಣ್ಣುಮಕ್ಕಳ ನಿಗೂಢ ಸಾವುಗಳು, ಆತ್ಮಹತ್ಯೆ ಎಂಬ ಹೆಸರಿನಲ್ಲಿ ಮುಚ್ಚಿ ಹಾಕಲಾದ ವಾಸ್ತವಗಳು, ಪ್ರಭಾವಿಗಳ ಕವಚದಲ್ಲಿ ಕಾಲಕಾಲಾಂತರದಿಂದ ಮರೆಮಾಚಲ್ಪಟ್ಟ ಧರ್ಮಸ್ಥಳದ ಬೆದರಿಕೆಯ ನಡುವೆ ಇದೀಗ ಜನರ ಆಗ್ರಹಕ್ಕೆ ಜಯ ಸಿಕ್ಕಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಮಹತ್ವದ ಹೆಜ್ಜೆ ಇಟ್ಟಿದೆ. ಈ ಪ್ರಾಮಾಣಿಕ ನಡೆಗೆ Siddaramaiah ಅವರಿಗೂ ಸರ್ಕಾರಕ್ಕೂ ಧನ್ಯವಾದಗಳು.
ಈ ಎಸ್ಐಟಿ ತಂಡ ನಿಜಕ್ಕೂ ನ್ಯಾಯವನ್ನು ಕಂಡುಕೊಳ್ಳಲಿ, ಕಾಮಾಂಧರು ಮತ್ತು ಕೊಲೆಗಾರರು ಯಾವುದೇ ಪ್ರಭಾವವಿಲ್ಲದೆ ಶಿಕ್ಷೆಗೆ ಒಳಗಾಗಲಿ ಎಂಬುದು ನಮ್ಮ ಆಶಯ. ಆದರೆ ಈ ಹೆಜ್ಜೆ ಸಾಕಾಗದು!
ನಿಷ್ಪಕ್ಷಪಾತ ತನಿಖೆ ಖಚಿತವಾಗಬೇಕಾದರೆ ಹೈಕೋರ್ಟ್ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯವರ ನೇರ ನೇತೃತ್ವದಲ್ಲಿ ಈ ತನಿಖೆ ನಡೆಯಬೇಕು. ಇಲ್ಲದಿದ್ದರೆ ಪ್ರಭಾವಿಗಳ ಒತ್ತಡದ ಅಡಿಯಲ್ಲಿ ತನಿಖೆ ದಿಕ್ಕು ತಪ್ಪುವ ಸಾಧ್ಯತೆಯನ್ನು ನಿರಾಕರಿಸಲು ಸಾಧ್ಯವಿಲ್ಲ.
“ಧರ್ಮಸ್ಥಳ ಫೈಲ್ಸ್”ಗೆ ನ್ಯಾಯ ಸಿಗಬೇಕು. ಸೌಜನ್ಯ ಸೇರಿದಂತೆ ಎಲ್ಲ ಅಸಹಜ ಸಾವುಗಳಿಗೆ ನ್ಯಾಯ ದೊರಕಲೇಬೇಕು.
– ಅಪ್ಸರ್ ಕೊಡ್ಲಿಪೇಟೆ, ಪ್ರಧಾನ ಕಾರ್ಯದರ್ಶಿ ಎಸ್ ಡಿ ಪಿ ಐ



