ಅಪಘಾತ ನಡೆಸಿ ಪರಾರಿಯಾದ ವ್ಯಕ್ತಿ

1 year ago

ಪತ್ತೆಗೆ ಪೊಲೀಸ್ ಇಲಾಖೆ ಮನವಿ

ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿದ್ದಾನೆ.

ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿಲ್ಲ. ಬೈಕಿನ ಭಾವಚಿತ್ರ ದೊರಕಿದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply