ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿತು. ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಮತ್ತಿತರರ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ ಎಂದರು.
ದೂರುದಾರ ಮಹಿಳೆ ಪದೇಪದೆ ದೂರು ದಾಖಲಿಸುವುದು ಅವರ ನಡವಳಿಕೆ ತೋರಿಸುತ್ತದೆ. ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಮತ್ತಿತರ ಪ್ರಮುಖ ವ್ಯಕ್ತಿಗಳ ವಿರುದ್ಧ ದೂರು ನೀಡುವುದು ಅಭ್ಯಾಸ ಮಾಡಿಕೊಂಡಿದ್ದಾರೆ. ಅಲ್ಲದೇ, ಗಂಡ ಮತ್ತು ಮಗನ ಮೇಲೆಯೂ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.
ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪಿಸಿ, ಯಡಿಯೂರಪ್ಪ ವಿರುದ್ದದ ಆರೋಪಕ್ಕೆ ಸಾಕಷ್ಟು ಪುರಾವೆಗಳಿಗೆ. ಹೀಗಾಗಿ ಪ್ರಕರಣ ರದ್ದು ಪಡಿಸಬಾರದು ಎಂದು ವಾದಿಸಿದ್ದರು.




