ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು ರಾಜ್ಯ ಕಂಡಿಲ್ಲ. ಜನರ ಜೀವ, ಆಸ್ತಿ ಮತ್ತು ಗೌರವವನ್ನು ರಕ್ಷಿಸಬೇಕಾದ ಪೊಲೀಸ್ ಇಲಾಖೆ ಇಂದು ಸುದ್ದಿಯಾಗುತ್ತಿರುವುದು ಅಪರಾಧಿಗಳನ್ನು ಹಿಡಿದಿದ್ದಕ್ಕಾಗಿ ಅಲ್ಲ – ಅಧಿಕಾರಿಗಳೇ ಕಾನೂನು ಮುರಿದ, ನಗೆಪಾಟಲಿಗೀಡಾದ ಘಟನೆಗಳಿಗಾಗಿ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ರಾಜ್ಯದ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಯೊಬ್ಬರು ಕಚೇರಿಯೊಳಗೇ ಅಸಭ್ಯ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂಬ ಆರೋಪಗಳು ಹೊರಬಿದ್ದಿರುವುದು, ವಿಡಿಯೋಗಳು ವೈರಲ್ ಆಗಿರುವುದು ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸ್ ಇಲಾಖೆ ನೈತಿಕವಾಗಿ ಎಷ್ಟು ಅಧಃಪತನವಾಗಿದೆ ಎನ್ನುವುದಕ್ಕೆ ಜೀವಂತ ಸಾಕ್ಷಿ. ಇದು ಕೇವಲ ಒಬ್ಬ ಅಧಿಕಾರಿಯ ವೈಯಕ್ತಿಕ ತಪ್ಪಲ್ಲ – ಇಡೀ ಪೊಲೀಸ್ ವ್ಯವಸ್ಥೆಯ ನೈತಿಕ ಪತನದ ನಿದರ್ಶನ.
ಗೃಹ ಸಚಿವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಧಿಕಾರಿಯೊಬ್ಬರ ವಿರುದ್ಧ ಅನೇಕ ಗಂಭೀರ ಆರೋಪಗಳಿದ್ದರೂ ಯಾವುದೇ ಕಠಿಣ ಕ್ರಮ ಇಲ್ಲದಿರುವುದು ಸರ್ಕಾರ ಈ ರೀತಿಯ ವರ್ತನೆಗೆ ಪರೋಕ್ಷ ರಕ್ಷಣೆ ನೀಡುತ್ತಿದೆಯೇ ಎಂಬ ಅನುಮಾನ ಸಹಜವಾಗಿ ಮೂಡುತ್ತಿದೆ. ಶಿಸ್ತಿನ ಇಲಾಖೆಯ ಗೌರವ ಸಾರ್ವಜನಿಕರ ಮುಂದೆ ಮಣ್ಣಾಗುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿಕೊಂಡಿರುವುದು ಅಸಹ್ಯ.
ಒಂದೆಡೆ ಪೊಲೀಸ್ ಇಲಾಖೆಯೊಳಗಿನ ಅಶಿಸ್ತು ಮತ್ತು ಅನಾಚಾರ, ಮತ್ತೊಂದೆಡೆ ಅಪರಾಧಿಗಳ ರಾಜಾರೋಷ. ಪೊಲೀಸ್ ಕಮಿಷನರ್ ಕಚೇರಿಯ ಮೂಗಿನ ಕೆಳಗೇ ಹಣ ಲೂಟಿ ಆಗುತ್ತದೆ ಎಂದರೆ, ಸಾಮಾನ್ಯ ನಾಗರಿಕನ ಸುರಕ್ಷತೆಗೆ ಯಾವ ಭರವಸೆ ಉಳಿದಿದೆ?
ರಾಜ್ಯದಲ್ಲಿ ಎಟಿಎಂ ಲೂಟಿ, ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಪತ್ತೆ ಕಾರ್ಯದಲ್ಲಿ ಇಲಾಖೆ ನಿರಂತರವಾಗಿ ವಿಫಲವಾಗುತ್ತಿದೆ. ಪೊಲೀಸರ ಗಮನ ಅಪರಾಧಿಗಳ ಮೇಲೆ ಇದೆಯೋ, ಅಥವಾ ರಾಜಕೀಯ ಒತ್ತಡ ಮತ್ತು “ಕಲೆಕ್ಷನ್ ವ್ಯವಸ್ಥೆ” ಮೇಲೆಯೋ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.
ಇಂದು ಡ್ರಗ್ಸ್ ಜಾಲ ಹಳ್ಳಿಗಳವರೆಗೂ ವಿಸ್ತರಿಸಿದೆ. ಶಾಲಾ–ಕಾಲೇಜುಗಳ ಸುತ್ತ ಗಾಂಜಾ, ಮಾದಕ ವಸ್ತುಗಳ ವ್ಯಾಪಾರ ನಡೆಯುತ್ತಿದ್ದರೂ, ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪ್ರತಿಯೊಂದು ಪ್ರಶ್ನೆಗೆ “ತನಿಖೆ ನಡೆಯುತ್ತಿದೆ”, “ನನಗೆ ಗೊತ್ತಿಲ್ಲ” ಎಂಬ ಉತ್ತರ ಮಾತ್ರ. ರಾಜ್ಯದಲ್ಲಿನ ಡ್ರಗ್ಸ್ ದಂಧೆ ಪತ್ತೆ ಹಚ್ಚಲು ಅನ್ಯರಾಜ್ಯದ ಪೊಲೀಸರು ಬರಬೇಕಾಗಿರುವುದು ನಾಚಿಕೆಗೇಡು. ಪರಿಸ್ಥಿತಿ ಹೀಗೆ ಮುಂದುವರೆದರೆ ಕರ್ನಾಟಕದ ಒಂದು ತಲೆಮಾರು ಮಾದಕ ವಸ್ತುಗಳ ನಶೆಗೆ ಬಲಿಯಾಗುವುದು ನಿಶ್ಚಿತ.
ಗೃಹ ಸಚಿವ @DrParameshwara ಅವರೇ, ನಿಮ್ಮ ಇಲಾಖೆಯ ಅಧಿಕಾರಿಗಳು ಕಚೇರಿಯೊಳಗೇ ಅನಾಚಾರ ಎಸಗುತ್ತಿದ್ದರೂ ನೀವು ಮೌನವಾಗಿರುವುದು, ಇಲಾಖೆಯ me ನಿಮ್ಮ ಹಿಡಿತದ ಕೊರತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಗೃಹ ಇಲಾಖೆಯ ಮೇಲೆ ತಮಗೆ ಆಸಕ್ತಿ ನಿಯಂತ್ರಣವೇ ಇಲ್ಲದಿದ್ದರೆ, ಆ ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವ ನೈತಿಕ ಹಕ್ಕು ನಿಮಗಿಲ್ಲ?
ಇಂದು ಮಹಿಳೆಯರು, ಯುವಕರು, ಹಿರಿಯ ನಾಗರಿಕರು ಬೀದಿಯಲ್ಲಿ ಸುರಕ್ಷಿತವಾಗಿಲ್ಲವೆಂಬ ಭಾವನೆ ಹೊಂದಿದ್ದರೆ, ಅದಕ್ಕೆ @INCKarnataka ಸರ್ಕಾರದ ಅಸಮರ್ಥ ಆಡಳಿತವೇ ಕಾರಣ.
ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ “ಬಿ–ಟೀಮ್” ಆಗಿ ಬಳಸುತ್ತಿದೆಯೇ? ಜನಸಾಮಾನ್ಯರಿಗೆ ನ್ಯಾಯ ಸಿಗದ ಈ ವ್ಯವಸ್ಥೆಗೆ ಯಾರು ಹೊಣೆ? ಇದು ಇಂದು ಜನಸಾಮಾನ್ಯರು ಕೇಳುತ್ತಿರುವ ಪ್ರಶ್ನೆಗಳು.
ಸಿಎಂ @siddaramaiah ನವರೇ, ಗೃಹ ಇಲಾಖೆಯ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಿರಿ.
ರಾಜ್ಯದ ಜನರ ಸುರಕ್ಷತೆಯೊಂದಿಗೆ ಆಟವಾಡಬೇಡಿ. ಕಾನೂನು ಸುವ್ಯವಸ್ಥೆಗೆ ಕಳಂಕ ಬಂದರೆ ರಾಜ್ಯದ ವರ್ಚಸ್ಸು, ಆರ್ಥಿಕ ವ್ಯವಸ್ಥೆ, ಹೂಡಿಕೆ, ಕೈಗಾರಿಕೋದ್ಯಮ, ಉದ್ಯೋಗ ಸೃಷ್ಟಿ ಮೇಲೆ ದೀರ್ಘಕಾಲೀನ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಇದನ್ನ ಗಂಭೀರವಾಗಿ ಪರಿಗಣಿಸಿ ಗೃಹ ಸಚಿವರನ್ನು ಬದಲಿಸಿ.
– ಆರ್ ಅಶೋಕ್, ವಿರೋಧ ಪಕ್ಷದ ನಾಯಕ




