ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ನೀಡಿರುವ 1.25 ಕೋಟಿ ರೂ. ಹಣ ವಂಚನೆ ಪ್ರಕರಣಕ್ಕೆ ಸಂಬಂಧ ಎಂ ಎನ್ ಕುಮಾರ್ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದೀಪ್ ನಟನೆಯ ‘ಮಾಣಿಕ್ಯ’ ಪುನೀತ್ ರಾಜ್ ಕುಮಾರ್ ಅಭಿನಯದ ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಎಂ ಎನ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಪ್ರಭಾವಿ ನಿರ್ಮಾಪಕ ಎಂದು ಗುರುತಿಕೊಂಡಿದ್ದಾರೆ.
ಜಗ್ಗೇಶ್ ಅವರು ಎಂ ಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸಾಲದ ಹಣವೋ ಅಥವಾ ಸಂಭಾವನೆ ಬಾಕಿ ಮೊತ್ತವೇ ಎಂಬ ಬಗ್ಗೆ ಇನ್ನಷ್ಟು ವಿವರಗಳು ಬಹಿರಂವಾಗಬೇಕಿದೆ.
ಎಂ ಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಆರೋಪಿಸಿದ್ದರು. ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು. ಆ ಬಳಿಕ ನಟ ಸುದೀಪ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ನಡೆಯುತ್ತಿದೆ.




