ಬೆಂಗಳೂರು: ಮೈಸೂರು ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ 1916ರಲ್ಲಿ ಸ್ಥಾಪನೆಯಾಗಿ, ಇದೀಗ ರಾಜ್ಯ ಸರ್ಕಾರದ ಒಡೆತನದಲ್ಲಿ ಶತಮಾನೋತ್ಸವವನ್ನು ಆಚರಿಸಿ ಮುನ್ನಡೆಯುತ್ತಿದೆ. ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿದ್ದು, ವಿವಿಧ ಸುಗಂಧ ದ್ರವ್ಯ, ಸೋಪ್ ಗಳ ಉತ್ಪಾದನೆಯ ಮೂಲಕ ರಾಜ್ಯ ಮಾತ್ರವಲ್ಲದೆ ದೇಶವಿದೇಶದಲ್ಲೂ ಸದ್ದು ಮಾಡಿದೆ. ಮಾರಾಟದ ಮೂಲಕ ಆದಾಯವನ್ನು ದಿನೇದಿನೇ ವೃದ್ಧಿಗೊಳಿಕೊಳ್ಳುತ್ತಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೈಸೂರು ಸ್ಯಾಂಡಲ್ ಸೋಪ್ ಉತ್ಪನ್ನಗಳ ಪರವಾಗಿ ನಟಿ ಪೂಜಾ ಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೈಬರಹದಲ್ಲಿ ಬರೆದಿರುವ ಪತ್ರ ಮತ್ತು ಮೈಸೂರು ಸ್ಯಾಂಡಲ್ ಉತ್ಪನ್ನಗಳನ್ನು ಹಂಚಿಕೊಳ್ಳುವ ಮೂಲಕ ಈ ಉತ್ಪನ್ನಗಳಿಗೆ ಪ್ರಚಾರ ನೀಡಿದ್ದಾರೆ.

ಪತ್ರದಲ್ಲಿ, ಇತ್ತೀಚೆಗೆ ಪತ್ರಿಕೆಯೊಂದರಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತನ್ನ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ದ್ವಿಗುಣಗೊಳಿಸಿರುವ ವರದಿ, ಈ ನೆಲದ ಕೈಗಾರಿಕೆ ಮತ್ತು ಉತ್ಪನ್ನಗಳ ಶ್ರೇಷ್ಠತತೆಗೆ ಸಾಕ್ಷಿ ಎಂದಿದ್ದಾರೆ.

ಅಲ್ಲದೇ, ಆಗಾಗ್ಗೆ ಬೇರೆ ಸೋಪ್ ಗಳ ಮೋಹಕ್ಕೆ ಒಳಗಾದರೂ, ಮತ್ತೆ ಮತ್ತೆ ಕಾಡುವ ಪ್ರೀತಿಯಂತೆ ಮನೆ-ಮನ ಸೇರುವ, ಶತಮಾನದ ಇತಿಹಾಸ, ಅತ್ಯುತ್ತಮ ಸುಗಂಧ ಮತ್ತು ನಿರಂತರ ಗುಣಮಟ್ಟದ ಸ್ಥಿರಿತೆಯಿಂದಾಗಿ, ಕನ್ನಡಿಗರೆಲ್ಲರ ಹೆಮ್ಮೆಯಾಗಿರುವ ಮೈಸೂರು ಸ್ಯಾಂಡಲ್ ಸೋಪ್ ನ ಬಗ್ಗೆ ತಮ್ಮ ಭಾವನೆ, ಅಭಿಪ್ರಾಯ ಮತ್ತು ನೆನಪುಗಳಿದ್ದರೆ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಕರೆನೀಡಿದ್ದಾರೆ.





