ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆದರೆ ಅವರ ವಿರುದ್ಧ ದಾಖಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದುವರೆಸಲಿದೆ. ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಹೈಕೋರ್ಟ್ ಪೋಸ್ಕೋ ಕೋರ್ಟ್ ಗೆ ಮರಳಿಸಿದೆ. ಹೀಗಾಗಿ ಯಡಿಯೂರಪ್ಪ ಅವರು ವಿಚಾರಣೆಯನ್ನು ಎದುರಿಸಲೇಬೇಕು ಎಂದು ಹೇಳಿರುವ ನ್ಯಾಯಾಲಯ, ವಿಚಾರಣೆಗೆ ತನಿಖಾಧಿಕಾರಿಗಳು ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.




