ಎಟಿಎಮ್ ಯಂತ್ರ ಕೂಡಲೇ ಮರುಸ್ಥಾಪನೆಗೊಳಿಸಲು ಡಿವೈಎಫ್ಐನಿಂದ ರೀಜನಲ್ ಅಧಿಕಾರಿಗೆ ಪೋಸ್ಟ್ ಕಾರ್ಡ್ ಚಳುವಳಿ
ಮಂಗಳೂರು: ಬಜಾಲ್ ಶಾಖೆಯ ಎಟಿಎಮ್ ಕೇಂದ್ರವನ್ನು ನವೀಕರಣ ಸಹಿತ ಮರು ಸ್ಥಾಪಿಸುವ ( installation) ಕೆಲಸಗಳನ್ನು ಆದಷ್ಟು ಬೇಗ ಕೈಗೊಂಡು ಗ್ರಾಹಕರ ಬಳಕೆಗೆ ಸಿಗುವಂತೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಡಿವೈಎಫ್ಐ ಬಜಾಲ್ ಘಟಕ ವತಿಯಿಂದ ಬಜಾಲ್ ಅಂಚೆ ಕಚೇರಿ ಮುಂಭಾಗ ಪೋಸ್ಟ್ ಕಾರ್ಡ್ ಚಳುವಳಿಯನ್ನು ಹಮ್ಮಿಕೊಂಡಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಈ ಭಾಗದ ಜನರ ನಿರಂತರ ಒತ್ತಡದ ನಂತರ ಹೊಸದಾದ ಎಟಿಎಮ್ ಯಂತ್ರ ಬಜಾಲ್ ಶಾಖೆಗೆ ಬಂದು ತಲುಪಿದೆ. ಆದರೆ ಅದನ್ನು ಮರುಸ್ಥಾಪಿಸಲು ಬೇಕಾದ ಕ್ರಮ ಜರುಗಿಸದೆ ವಿಳಂಬ ನೀತಿ ಅನುಸರಿಸೋದರಿಂದ ಸ್ಥಳೀಯ ಗ್ರಾಹಕರು, ಸಣ್ಣ ಪುಟ್ಟ ವ್ಯಾಪಾರಸ್ತರು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಡಿವೈಎಫ್ಐ ಸಂಘಟನೆ ಹಿರಿಯ ಅಧಿಕಾರಿಗಳಿಗೆ ಒತ್ತಡ ಹೇರುವ ಸಲುವಾಗಿ ಪೋಸ್ಟ್ ಕಾರ್ಡ್ ಚಳುವಳಿಗೆ ಚಾಲನೆ ನೀಡಿದೆ ಅಧಿಕಾರಿಗಳು ಈ ಕೂಡಲೇ ಕೇಂದ್ರದ ಮರುಸ್ಥಾಪನೆಗೆ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಡಿವೈಎಫ್ಐ ನಗರ ಅಧ್ಯಕ್ಷ ಜಗದೀಶ್ ಬಜಾಲ್, ಸ್ಥಳೀಯ ಮುಖಂಡರುಗಳಾದ ಪ್ರಕಾಶ್ ಶೆಟ್ಟಿ, ದೀಕ್ಷಿತ್ ಭಂಡಾರಿ, ವರಪ್ರಸಾದ್, ಜಯಪ್ರಕಾಶ್ ಜಲ್ಲಿಗುಡ್ಡೆ, ಅನ್ಸಾರ್ ಬಜಾಲ್, ಅಶೋಕ್ ಸಾಲ್ಯಾನ್, ಸಾಮಾಜಿಕ ಕಾರ್ಯಕರ್ತರಾದ ಲಾರೆನ್ಸ್ ಡಿಸೋಜ, ಸಿರಿಲ್ ಡಿಸೋಜ, ಉದ್ಯಮಿ ಪ್ರವೀಣ್ ಫಿಗ್ರೇಡಾ, ಶೃತಿ, ಚಿತ್ರಾ, ಯೋಗಿತಾ, ದೀಪಕ್ ಬಜಾಲ್ ಮುಂತಾದವರು ಹಾಜರಿದ್ದರು.







