ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 8ರಂದು ನಡೆಸಲು ನಿಗದಿಯಾಗಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.
ಸರ್ಕಾರದ ಫೆ.22 ರ ಆದೇಶದನ್ವಯ, ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆಗಳು, ಸೇವೆಯಲ್ಲಿರುವವರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು.
ದೇಶಾದ್ಯಂತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.




