ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಮಹತ್ವದ ಬೆಳವಣಿಗೆಗಳ ನಡುವೆ ಪೆನ್ ಡ್ರೈವ್ ಬಹಿರಂಗ ಪಡಿಸಿದ್ದಾನೆ ಎಂದು ಹೇಳಲಾಗಿರುವ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ನಾಪತ್ತೆಯಾಗಿದ್ದಾರೆ. ಆತ ವಿದೇಶಕ್ಕೆ ತೆರಳಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್, ಪ್ರಜ್ವಲ್ ಬಳಿ ಕಾರು ಚಾಲಕನಾಗಿ 13 ವರ್ಷ ಕೆಲಸ ಮಾಡಿದ್ದರು. 2 ದಿನದ ಹಿಂದೆ SIT ಮುಂದೆ ಹಾಜರಾಗುವುದಾಗಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು.
ಕಾರ್ತಿಕ್ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾರ್ತಿಕ್ ಮಲೇಷಿಯಾಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾರ್ತಿಕ್ ನನ್ನು ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದರು.



