ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಮಹತ್ವದ ಬೆಳವಣಿಗೆಗಳ ನಡುವೆ ಪೆನ್ ಡ್ರೈವ್ ಬಹಿರಂಗ ಪಡಿಸಿದ್ದಾನೆ ಎಂದು ಹೇಳಲಾಗಿರುವ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ನಾಪತ್ತೆಯಾಗಿದ್ದಾರೆ. ಆತ ವಿದೇಶಕ್ಕೆ ತೆರಳಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್, ಪ್ರಜ್ವಲ್ ಬಳಿ ಕಾರು ಚಾಲಕನಾಗಿ 13 ವರ್ಷ ಕೆಲಸ ಮಾಡಿದ್ದರು. 2 ದಿನದ ಹಿಂದೆ SIT ಮುಂದೆ ಹಾಜರಾಗುವುದಾಗಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು.
ಕಾರ್ತಿಕ್ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾರ್ತಿಕ್ ಮಲೇಷಿಯಾಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾರ್ತಿಕ್ ನನ್ನು ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದರು.




