ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಮಹತ್ವದ ಬೆಳವಣಿಗೆಗಳ ನಡುವೆ ಪೆನ್ ಡ್ರೈವ್ ಬಹಿರಂಗ ಪಡಿಸಿದ್ದಾನೆ ಎಂದು ಹೇಳಲಾಗಿರುವ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ನಾಪತ್ತೆಯಾಗಿದ್ದಾರೆ. ಆತ ವಿದೇಶಕ್ಕೆ ತೆರಳಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್, ಪ್ರಜ್ವಲ್ ಬಳಿ ಕಾರು ಚಾಲಕನಾಗಿ 13 ವರ್ಷ ಕೆಲಸ ಮಾಡಿದ್ದರು. 2 ದಿನದ ಹಿಂದೆ SIT ಮುಂದೆ ಹಾಜರಾಗುವುದಾಗಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು.
ಕಾರ್ತಿಕ್ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾರ್ತಿಕ್ ಮಲೇಷಿಯಾಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾರ್ತಿಕ್ ನನ್ನು ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದರು.




