ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪ, ನನಗೆ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನುಣಿಚಿಕೊಳ್ಳುವುದು ಸರಿಯಲ್ಲ. ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇನಾನಂದ ಚೌಹಾಣ್ ಅವರು ದಾಖಲೆ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಹೆಸರನ್ನ ಬಳಸಿಕೊಳ್ಳಾಗಿದೆ. ಪ್ರಲ್ಹಾದ್ ಜೋಶಿಯವರ ಪ್ರಭಾವ ಬಳಿಸಿಕೊಂಡು ವಂಚಿಸಲಾಗಿದೆ ಎಂದರು.
ಇಡಿ, ಐಟಿಯವರನ್ನ ಛೂ ಬಿಟ್ಟು ಹೆದರಿಸಿ ದೇವಾನಂದ ಚೌಹಾಣ್ ಅವರನ್ನ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಗೋಪಾಲ್ ಜೋಶಿಯವರು ಆರ್.ಎಸ್.ಎಸ್ ನಲ್ಲಿ ತೊಡಗಿಸಿಕೊಂಡವರು. ಆರ್.ಎಸ್.ಎಸ್ ನ ಕೆಲ ನಾಯಕರು ಈ ರೀತಿಯ ಟಿಕೆಟ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಪಿಸಿದರು.




