ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಪ್ರಥಮ್ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿ ನಟ ದರ್ಶನ್ ಅಭಿಮಾನಿಗಳಿಗೆ ಬುದ್ದಿಮಾತು ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ “ಕರ್ನಾಟಕದ ಅಳಿಯ” ಸಿನಿಮಾ ತಂಡದ ಕಚೇರಿ ನಂಬರ್ಗೆ ಕರೆ ಮಾಡಿ ಬೆದರಿಕೆ ಹಾಕುತಿದ್ದೀರಾ! ಇನ್ಮೆಲೆ ನನಗೆ ಬರುವ ಕರೆ, ಮೆಸೇಜ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಸೇರಿದಂತೆ ಎಲ್ಲವನ್ನು ಪೋಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು ಅಂಧಾಭಿಮಾನಿಗಳೇ ಅದನ್ನು ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ ಎಂದು ಪ್ರಥಮ್ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಮ್ಮ ಬಾಸ್ ದರ್ಶನ್ ಅವರದ್ದು ಏನು ತಪ್ಪಿಲ್ಲ ಎಂದು ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಥಮ್, ಅನ್ನಪೂರ್ಣೇಶ್ವರಿ ನಗರ ಠಾಣೆ ನಮ್ಮ ಮನೆಯಿಂದ ಹತ್ತಿರದಲ್ಲಿದೆ. ಅಲ್ಲಿನ ಇನ್ಸ್ಪೆಕ್ಟರ್ ಅಥವಾ ಎಸಿಪಿಗೆ ಹೇಳಿ ಒಂದು ವಾರದ ಮಟ್ಟಿಗೆ ಪೊಲೀಸ್ ಕಾನ್ಸ್ಟೆಬಲ್ ಆಗಲು ನನಗೆ ಅನುಮತಿ ಕೊಡಿಸಿ, ನನಗೆ ಸಂಬಳ ಕೊಡಬೇಕಾಗಿಲ್ಲ, ಒಂದು ದೊಣ್ಣೆ ಸಿಕ್ಕಿದರೆ ಸಾಕು ಸ್ಟೇಷನ್ ಮುಂದೆ ನಿಂತಿರುವವರಿಗೆಲ್ಲರಿಗೂ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ ಎಂದಿದ್ದರು.
ಏಕೆಂದರೆ, ಅಲ್ಲಿರುವ ಒಬ್ಬ ಮಗಾನೂ ಅವರ ಅಮ್ಮನಿಗೆ ಒಂದು ಹೊತ್ತು ಹಿಟ್ಟು ಕೊಡಿಸುವ ಯೋಗ್ಯತೆ ಇಲ್ಲ. ಕೆಲವರು ಭ್ರಮೆಯಲ್ಲಿದ್ದಾರೆ. ನಮ್ಮಿಂದ ಟಿಆರ್ಪಿ ಮತ್ತು ನಮ್ಮ ಬಾಸ್ನಿಂದ ಟಿಆರ್ಪಿ ಬರುತ್ತೆ ಎಂಬ ಭ್ರಮಾಲೋಕದಲ್ಲಿ ಮುಳುಗಿದ್ದಾರೆ. ಇವರೆಲ್ಲ ವಾಟ್ಸ್ ಆ್ಯಪ್ ಯೂನಿವರ್ಸಿಟಿ ಮಂದಿ, ಮಾಧ್ಯಮ ಹೇಗೆ ನಡೆಯುತ್ತದೆ ಎಂಬುದೇ ಗೊತ್ತಿಲ್ಲ ಎಂದು ದರ್ಶನ್ ಅಭಿಮಾನಿಗಳನ್ನು ಪ್ರಥಮ್ ತರಾಟೆಗೆ ತೆಗೆದುಕೊಂಡಿದ್ದರು.
ಪ್ರಥಮ್ ಅವರ ಮಾತುಗಳಿಂದ ರೊಚ್ಚಿಗೆದ್ದಿರುವ ದರ್ಶನ್ ಅಭಿಮಾನಿಗಳು ಪ್ರಥಮ್ ಅವರಿಗೆ ಜೀವ ಬೆದರಿಕೆ ಹಾಕುತ್ತಿದ್ದು, ಇದೀಗ ಜ್ಞಾನ ಭಾರತಿ ನಗರ ಪೊಲೀಸ್ ಠಾಣೆಗೆ ತೆರಳಿ ದರ್ಶನ್ ಅಭಿಮಾನಿಗಳ ವಿರುದ್ಧ ಪ್ರಥಮ್ ದೂರು ದಾಖಲಿಸಿದ್ದಾರೆ.




