ಪ್ರತಿಗಂಧರ್ವ ನೂತನ ನಾಟಕ ಕಥಾಪೂಜೆ

6 months ago

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆ ವತಿಯಿಂದ ಅಕ್ಟೋಬರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಪ್ರತಿಗಂಧರ್ವ ನೂತನ ನಾಟಕ ಕಥಾಪೂಜೆ (ಕಲಾವಿದರಿಗೆ ತರಬೇತಿ ಆರಂಭ) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡ. ಸತೀಶ ಕುಮಾರ ಪಿ ವಲ್ಲೇಪುರೆ ಉದ್ಘಾಟಿಸುವರು. ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜಮೂರ್ತಿ, ಕರ್ನಾಟಕ ರಂಗಸಮಾಜದ ಸದಸ್ಯ ಡಾ.ಕೆ.ರಾಮಕೃಷ್ಣಯ್ಯ, ನಾಟಕಕಾರ ಡಾ.ರಾಜಪ್ಪ ದಳವಾಯಿ, ರಂಗ ನಿರ್ದೇಶಕ ಮಾಲತೇಶ ಬಡಿಗೇರ ಭಾಗವಹಿಸುವರು.

Leave a Reply