ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆ

7 months ago

ಬೆಂಗಳೂರು: ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿ (ರಿ) ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆ ಹಾಗೂ ವಿಚಾರ ಸಂಕೀರ್ಣ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿಯನ್ನು ಉದ್ಘಾಟಿಸಿ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರು ಡಾ. ಎ. ಆರ್. ಗೋವಿಂದಸ್ವಾಮಿ ಮಾತನಾಡಿ, ಹೊಸದಾಗಿ ಜಾರಿಯಲ್ಲಿ ಬರುತ್ತಿರುವ ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿಗೆ ಶುಭಾಶಯ ಕೋರಿದರು.

ಕರ್ನಾಟಕ ಬಂಜಾರ ಸಿನಿಮಾ ಹಾಗೂ ಸಾಹಿತ್ಯ ಬರವಣಿಗೆಗೆ ಅದ್ಭುತವಾದ ಅವಕಾಶವಿದ್ದು ಎಲ್ಲಾ ಕಲಾವಿದರು ಈ ಅವಕಾಶ ಉಪಯೋಗಿಸಿಕೊಂಡು ಸಾಂಸ್ಕೃತಿಕ ರಾಯಭಾರಿಗಳಾಗಬೇಕಾಗಿ ಕರೆ ನೀಡಿದರು.

ಇಂದಿನ ಯುಗ ಎಲೆಕ್ಟ್ರಾನಿಕ್ ಯುಗವಾಗಿದ್ದು ಸಾಮಾಜಿಕ ಮಾಧ್ಯಮದ ಯುಗವಾಗಿದ್ದು ಈ ಅವಕಾಶವನ್ನು ಬಳಸಿಕೊಂಡು ಸಂಸ್ಕೃತಿಕಾವಾಗಿ ಹಾಗೂ ಆರ್ಥಿಕವಾಗಿ ಪ್ರಬಲವಾಗಿ ಬೆಳೆಯಬೇಕು ಎಂದು ಅಭಿಪ್ರಾಯಪಟ್ಟರು.

Leave a Reply