ಬೆಂಗಳೂರು: ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ, ಒತ್ತಡಕ್ಕೆ ಮಣಿದು ಕಬ್ಬಿಗೆ ಅವೈಜ್ಞಾನಿಕ ಬೆಲೆ ನಿಗದಿಪಡಿಸಿ ಆದೇಶ ಹೊರಡಿಸಿದೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ರದ್ದುಪಡಿಸುವಂತೆ ಕೋರಿ ಹಲವು ಖಾಸಗಿ ಸಕ್ಕರೆ ಕಾರ್ಖಾನೆಗಳು ಹೈಕೋರ್ಟ್ ಮೊರೆ ಹೊಕ್ಕಿವೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ರೇಣುಕಾ ಶುಗರ್ಸ್, ನಿರಾಣಿ ಶುಗರ್ಸ್, ಜೆಮ್ ಶುಗರ್ಸ್, ಕೆಪಿಆರ್ ಶುಗರ್ಸ್, ಗೋದಾವರಿ ಬಯೋ ರಿಫೈನರೀಸ್ ಈ ಬಗ್ಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು.
ರಾಜ್ಯ ಸರ್ಕಾರ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ 3250 ರೂ. ದರ ನಿಗದಿ ಮಾಡಿದೆ. ಕಟಾವು, ಸಾಗಾಣಿಕೆ ಸೇರಿದರೆ ಕಾರ್ಖಾನೆಗಳಿಗೆ 4,150 ರೂ. ವೆಚ್ಚವಾಗಲಿದ್ದು, ಕಾನೂನು ಪಾಲಿಸದೇ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಆದೇಶ ನೀಡಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳಿಗೆ ಭರಿಸಲಾಗದ ನಷ್ಟ ಉಂಟಾಗಲಿದೆ. ಹೀಗಾಗಿ ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿವೆ.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದರು. ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಡಿಸೆಂಬರ್ 17ಕ್ಕೆ ವಿಚಾರಣೆ ಮುಂದೂಡಿದರು.




