ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರ ಬರ ಪರಿಹಾರ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಬಗ್ಗೆ ಗಮನ ಹರಿಸತೊಡಗಿದೆ. ಆದರೆ ಇದಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಮಾದರಿ ನೀತಿ ಸಂಹಿತೆ ವಿನಾಯತಿ ಕೋರಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ರಾಜ್ಯದಲ್ಲಿ ಈಗಾಗಲೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಹಾಗೂ ಹಾಗೂ ಸಭೆಯ ನಿರ್ಧಾರಗಳಿಗೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಬೇಕೆಂದು ಅನುಮತಿ ಕೋರಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಹವಾಮಾನ ಇಲಾಖೆ ಮುನ್ಸೂಚನೆಯ ಪುಕಾರ, ರಾಜ್ಯದಲ್ಲಿ ಪ್ರಸಕ್ತ ವರ್ಷ ಮುಂಗಾರು ಮಳೆ ವಿಳಂಬವಾಗುವ ವರದಿ ನೀಡಿರುವುದರಿಂದ ಮುಂದಿನ ಎರಡು ತಿಂಗಳವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಶುದ್ಧವಾದ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅತ್ಯವಶ್ಯಕವಾಗಿರುತ್ತದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.



