ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಘಟಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪ್ರಾಥಮಿಕ ಆರೋಗ್ಯ ಕೇಂದ್ರ ಐಗೂರು, ಗ್ರಾಮ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವೇಶ್ವರ ಪ್ರೌಢಶಾಲೆ, ನಿವೇಧಿತಾ ಶಾಲೆ ಐಗೂರು ಇವರ ಸಂಯುಕ್ತ ಆಶ್ರಯದಲ್ಲಿ ತಂಬಾಕು ಮುಕ್ತ ಭಾರತ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಚಿತ್ರ ಡಿ.ವಿ ಪ್ರಥಮ, ವಿನುತ ಸಿ. ಆರ್ ದ್ವಿತೀಯ, ಜಾನವಿ ಸಿ.ಪಿ ತೃತೀಯ ಬಹುಮಾನ ಪಡೆದರು. ಶ್ರೀ ಬಸವೇಶ್ವರ ಪ್ರೌಢಶಾಲೆ ಯಶೋಧ ಡಿ.ಎಂ ಪ್ರಥಮ ಬಹುಮಾನ, ನಾಗಮ್ಮ ದ್ವಿತೀಯ, ಅನುಷ ಕೆ ತೃತೀಯ ಬಹುಮಾನ, ನಿವೇದಿತ ಶಾಲೆ ಐಶ್ವರ್ಯ.ಕೆ ಪ್ರಥಮ, ಗಣೇಶ್ ದ್ವಿತೀಯ, ರೇಖಾ ತೃತೀಯ ಬಹುಮಾನ ಪಡೆದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜ್ಯೋತಿ, ಆಡಳಿತ ವೈದ್ಯಾಧಿಕಾರಿ ಡಾ.ಸೀತಾಲಕ್ಷೀ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸೋಶಿಯಲ್ ವರ್ಕರ್ ಶೈಲಾ ಶಾಮನೂರು ಹಾಜರಿದ್ದರು.




