ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಘಟಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪ್ರಾಥಮಿಕ ಆರೋಗ್ಯ ಕೇಂದ್ರ ಐಗೂರು, ಗ್ರಾಮ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವೇಶ್ವರ ಪ್ರೌಢಶಾಲೆ, ನಿವೇಧಿತಾ ಶಾಲೆ ಐಗೂರು ಇವರ ಸಂಯುಕ್ತ ಆಶ್ರಯದಲ್ಲಿ ತಂಬಾಕು ಮುಕ್ತ ಭಾರತ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಚಿತ್ರ ಡಿ.ವಿ ಪ್ರಥಮ, ವಿನುತ ಸಿ. ಆರ್ ದ್ವಿತೀಯ, ಜಾನವಿ ಸಿ.ಪಿ ತೃತೀಯ ಬಹುಮಾನ ಪಡೆದರು. ಶ್ರೀ ಬಸವೇಶ್ವರ ಪ್ರೌಢಶಾಲೆ ಯಶೋಧ ಡಿ.ಎಂ ಪ್ರಥಮ ಬಹುಮಾನ, ನಾಗಮ್ಮ ದ್ವಿತೀಯ, ಅನುಷ ಕೆ ತೃತೀಯ ಬಹುಮಾನ, ನಿವೇದಿತ ಶಾಲೆ ಐಶ್ವರ್ಯ.ಕೆ ಪ್ರಥಮ, ಗಣೇಶ್ ದ್ವಿತೀಯ, ರೇಖಾ ತೃತೀಯ ಬಹುಮಾನ ಪಡೆದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜ್ಯೋತಿ, ಆಡಳಿತ ವೈದ್ಯಾಧಿಕಾರಿ ಡಾ.ಸೀತಾಲಕ್ಷೀ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸೋಶಿಯಲ್ ವರ್ಕರ್ ಶೈಲಾ ಶಾಮನೂರು ಹಾಜರಿದ್ದರು.




