ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಅವರು ಉದ್ಯಮದ ಪಾಲುದಾರರು ಮೋಸ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸೌಂದರ್ಯ ಜಗದೀಶ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಸಿಕ್ಕಿದ್ದು,ಅದರಲ್ಲಿ ಪಾಲುದಾರರು ಮೋಸ ಮಾಡಿರುವುದು ಉಲ್ಲೇಖಗೊಂಡಿದೆ ಎಂದು ಜಗದೀಶ್ ಪತ್ನಿ ಶಶಿರೇಖಾ ನೀಡಿದ ದೂರಿನ ಅನ್ವಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪತಿಯ ಆತ್ಮಹತ್ಯೆಗೆ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಅವರೇ ಕಾರಣ ಹಾಗೂ ಅವರಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಶಶಿರೇಖಾ ಆರೋಪಿಸಿದ್ದಾರೆ. ಕಳೆದ ಏಪ್ರಿಲ್ 4ರಂದು ಸೌಂದರ್ಯ ಜಗದೀಶ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ದೂರಿನ ವಿವರ: ಮೇ 18ರಂದು ಜಗದೀಶ್ ಅವರ ರೂಮಿನಲ್ಲಿದ್ದ ಬಟ್ಟೆಯನ್ನು ಪೂಜೆಗಿಡಲು ತೆಗೆದುಕೊಳ್ಳುವಾಗ ಡೆತ್ ನೋಟ್ ಲಭ್ಯವಾಯಿತು. ಅದರಲ್ಲಿ, ಸೌಂದರ್ಯ ಕನ್ಸ್ಟ್ರಕ್ಷನ್ ಸಹ ಪಾಲುದಾರರಾದ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಅವರು ಜಗದೀಶ್ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು.
ಕಂಪನಿ ಲಾಭದಲ್ಲಿದ್ದರೂ ಸಹ ಸುಳ್ಳು ನಷ್ಟ ತೋರಿಸಿ ತಮ್ಮ ಕುಟುಂಬದ ಆಸ್ತಿಗಳನ್ನು ಬ್ಯಾಂಕ್ನಲ್ಲಿ ಅಡವಿರಿಸಿ ಸಾಲ ಪಡೆದು ಸುಮಾರು 60 ಕೋಟಿ ರೂ.ಯಷ್ಟು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ.
ನಂತರ ಸಬೂಬು ಹೇಳಿ ಖಾಲಿ ಚೆಕ್ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್ ಸಹಿಯನ್ನು ನಕಲಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ಇದನ್ನು ಪ್ರಶ್ನಿಸಿದಾಗ ಜಗದೀಶ್ ಅವರಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅದೇ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಸುರೇಶ್ ಹಾಗೂ ಹೊಂಬಣ್ಣ ಅವರ ಬಳಿ ಕೇಳಿದಾಗ ಅವರು ಹಣ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಒಂದು ವಾರಗಳ ಹಿಂದೆ ಸುರೇಶ್ ಹಾಗೂ ಹೊಂಬಣ್ಣ ಅವರು ಜಗದೀಶ್ ಅವರಿಗೆ ನಿರಂತರವಾಗಿ ಕರೆ ಮಾಡುತ್ತಿದ್ದರು. ಆ ಕರೆಗಳು ಬಂದಾಗ ಜಗದೀಶ್ ಜರ್ಜರಿತರಾಗುತ್ತಿದ್ದರು ಎಂದು ಶಶಿರೇಖಾ ಆರೋಪಿಸಿದ್ದಾರೆ.




