ಜಿ.ಎಂ.ನಂದಕುಮಾರ್, ಕೆ.ಟಿ.ಮಂಜುನಾಥ್ ಸೇರಿ ನೂರಾರು ಗುತ್ತಿಗೆದಾರರ ಬಂಧನ
ಬೆಂಗಳೂರು: ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ.ಮಜುನಾಥ್ ನೇತೃತ್ವದಲ್ಲಿ ಶೇಕಡ 25% ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಗುತ್ತಿಗೆದಾರರು ಸಂಪೂರ್ಣ ಕಾಮಗಾರಿ ಬಿಲ್ ಮೊತ್ತವನ್ನು 75ರಷ್ಟು ಬಿಡುಗಡೆ ಮಾಡಿ 25%ರಷ್ಟು ಜಿ.ಎಸ್.ಟಿ.18%ಮತ್ತು ಇನ್ನಿತರೆ ಕಟಾವಣೆ ಮಾಡುತ್ತಿದ್ದಾರೆ. ಸಂಪೂರ್ಣ ಬಿಲ್ ಪಾವತಿಯಾಗದೇ ಇರುವ ಕಾರಣ ಗುತ್ತಿಗೆದಾರ ಸಂಕಷ್ಟದಲ್ಲಿ ಇದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ಬಿಲ್ ಪಾವತಿ ವಿಳಂಬವಾಗುತ್ತಿರುವುದರಿಂದ ಬ್ಯಾಂಕ್ ನಲ್ಲಿ ಸಾಲದ ಮೇಲೆ ಬಡ್ಡಿ ಏರಿಕೆಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ. ಕೂಡಲೆ ಶೇಕಡ 25%ರಷ್ಟು ಗುತ್ತಿಗೆದಾರರಿಗೆ ಪಾವತಿ ಮಾಡಿದರೆ ಸಂಕಷ್ಟದಿಂದ ಪಾರಾಗಬಹುದು ಎಂದರು.
ಬಿಬಿಎಂಪಿ ಮುಖ್ಯ ಆಯುಕ್ತರು ಗುತ್ತಿಗೆದಾರರ ಸಮಸ್ಯೆಗಳು ಹೇಳುತ್ತಿಲ್ಲ, ಉಡಾಫೆ ಉತ್ತರ ನೀಡುತ್ತಾರೆ. ಇಂದಿನಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು, ಗುಂಡಿ ಮುಚ್ಚುವ ಕಾಮಗಾರಿಯನ್ನು ಯಾವ ಗುತ್ತಿಗೆದಾರರು ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಬಿಬಿಎಂಪಿ ಗುತ್ತಿಗೆದಾರರ ಫೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಇಲ್ಲಿ ಮಾಡುವಂತಿಲ್ಲ. ಆದ್ದರಿಂದ ನಿಮ್ಮನ್ನ ಬಂಧಿಸಲಾಗುತ್ತದೆ ಎಂದು ಹೇಳಿ ನೂರಾರು ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದರು.




