ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಮನವಿ
ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶನಿಗೌಡ ಭೇಟಿ ಮಾಡಿ ಕೋಲಾರ ಜಿಲ್ಲೆ , ಬಂಗಾರಪೇಟೆ ಸರಕಾರಿ ಶಾಲೆ ಶಿಕ್ಷಕಿ ಮಂಜುಳರವರಿಗೆ ಸೂಕ್ತ ರಕ್ಷಣೆ ಮತ್ತು ವರ್ಗಾವಣೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಈ ವೇಳೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದೇ ಸಂದರ್ಭದಲ್ಲಿ ರೋಶನಿಗೌಡ ಮಾತನಾಡಿ, ಸರಕಾರಿ ಮತ್ತು ಖಾಸಗಿ ಶಾಲೆಯ ಶಿಕ್ಷಕಿಯರಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಪಾಠ ಮಾಡಲು ಯಾವುದೇ ಅನುಕೂಲ ಮಾಡಿಕೊಡಬೇಕು. ಮಹಿಳಾ ಶಿಕ್ಷಕಿ ಕುಟುಂಬದ ಜವಾಬ್ಬಾರಿ ಜೊತೆಯಲ್ಲಿ , ಸಮಾಜ ಅಭಿವೃದ್ದಿಗಾಗಿ ಶ್ರಮಿಸುವಳು, ಅಂತಹ ಮಹಿಳೆಯರಿಗೆ ಭಯಭೀತಿ ಇಲ್ಲದೇ ಕೆಲಸ ಮಾಡುವಂತೆ ಆಗಬೇಕು. ಬಂಗಾರಪೇಟೆ ದುರುಂತದಿಂದ ಮಹಿಳೆಯರು ಅತಂಕದಲ್ಲಿ ಇದ್ದಾರೆ. ಮಹಿಳೆಯರು ಯಾವುದೇ ಭಯಪಡುವ ಅವಶ್ಯಕತೆ ನಿಮ್ಮ ಜೊತೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಇದೆ ಎಂದರು.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದವರು ನೀಡಿದ ಮನವಿಯನ್ನು ಸ್ವೀಕರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಮಂಜುಳರವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದರು.




