ಆಕ್ಷೇಪಣೆ ಸಲ್ಲಿಸಲು ಅವಕಾಶ
ಚಿತ್ರದುರ್ಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಸಲು ತಕರಾರು ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಬೆಂಗಳೂರು ಅವರ ಮಂಜೂರಾತಿ ಆದೇಶ ಸಂಖ್ಯೆ:ಪಜಾಪಪಂ/ಅಅನಿ/ ಭೂಒಯೋ/ಚಿತ್ರದುರ್ಗ/2025-26 ದಿನಾಂಕ:02.06.2025ರ ಆದೇಶದಲ್ಲಿ ಕೆ.ಹೆಚ್. ಹೊನ್ನೂರು ಸ್ವಾಮಿ ಬಿನ್ ಲೇ|| ಸಣ್ಣ ಹೊನ್ನೂರಪ್ಪ, ಬೊಮ್ಮಕ್ಕನಹಳ್ಳಿ ಗ್ರಾಮ, ಮೊಳಕಾಲ್ಮೂರು ತಾಲ್ಲೂಕು, ಕುರುಬ ಜನಾಂಗಕ್ಕೆ ಸೇರಿರುವ ಇವರ ಹೆಸರಿನಲ್ಲಿ ಮೊಳಕಾಲ್ಮೂರು ತಾಲ್ಲೂಕು ಸ್ವಾಮಿಕೆರೆ ಗ್ರಾಮದಲ್ಲಿ ಸರ್ವೇ ನಂ:19/02 ರಲ್ಲಿ 2 ಎಕರೆ ಖುಷ್ಕಿ ಭೂಮಿಯನ್ನು ಸಣ್ಣ ರಂಗಮ್ಮ ಕೋಂ ಜೆ.ಮಹಾಂತೇಶ್, ರಾಂಪುರ ಗ್ರಾಮ, ಮೊಳಕಾಲ್ಮೂರು ತಾಲ್ಲೂಕು, ಪರಿಶಿಷ್ಟ ಜಾತಿ (ಬುಡ್ಗ ಜಂಗಮ) ಜನಾಂಗದವರಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಸಿ ನೀಡಲು ಆದೇಶ ಹೊರಡಿಸಲಾಗಿದೆ.
ಅದರಂತೆ, ಈ ಸರ್ವೇ ನಂಬರ್ ಭೂಮಿಗೆ ಸಂಬಂಧಿಸಿದಂತೆ ಯಾವುದಾದರು ತಂಟೆ ತಕರಾರು ಇದ್ದಲ್ಲಿ 7 ದಿನಗಳೊಳಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಅವರ ಕಾರ್ಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ನಿಗದಿಪಡಿಸಲಾದ ದಿನಾಂಕದೊಳಗೆ ಆಕ್ಷೇಪಣೆ ಸಲ್ಲಿಸದಿದ್ದಲ್ಲಿ, ಯಾವುದೇ ಆಕ್ಷೇಪಣೆ ಇಲ್ಲವೆಂದು ಭಾವಿಸಿ ಭೂಮಿಯನ್ನು ಖರೀದಿಸಿ ಫಲಾನುಭವಿಗೆ ನೊಂದಣಿ ಮಾಡಿಸಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




