ಬೆಂಗಳೂರು: ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿ ವಿಧಾನ ಪರಿಷತ್ ಸದಸ್ಯರ ನಾಮಕರಣ ಸೇರಿದಂತೆ ಹಲವಾರು ವಿಚಾರಗಳು ಆಡಳಿತರೂಢ ಕಾಂಗ್ರೆಸ್ ನಲ್ಲಿ ತೀವ್ರ ಬಿಕ್ಕಟ್ಟು ಸೃಷ್ಟಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದನ್ನು ಬಗೆಹರಿಸುವ ದೃಷ್ಟಿಯಿಂದ ಬೆಂಗಳೂರು ಮತ್ತು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲಾ ಮತ್ತು ಕೆ ಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಅನೇಕ ಬಾರಿ ಪ್ರಯತ್ನ ನಡೆಸಿದರು ಕೂಡ ಬಗೆಹರಿದಿಲ್ಲ.
ಹೀಗಾಗಿ ಬಿಕ್ಕಟ್ಟು ಬಗೆಹರಿಸಲು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೊರೆ ಹೋಗಲಾಗಿದೆ. ನೇಮಕ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಲವು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ರಾಹುಲ್ ಗಾಂಧಿ ಆಗಸ್ಟ್ ಒಂದರಂದು ಸಭೆ ಕರೆದಿದ್ದಾರೆ.
ರಾಹುಲ್ ಗಾಂಧಿ ಅವರ ಬೇಟಿಗಾಗಿ ಮೂರು ಬಾರಿ ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮೂರು ಬಾರಿಯೂ ಅವರ ಭೇಟಿ ಸಾಧ್ಯವಾಗದೆ ಹಿಂತಿರುಗಿದ್ದರು.
ಇದೀಗ ನಾಲ್ಕನೇ ಬಾರಿ ರಾಹುಲ್ ಗಾಂಧಿ ಸಿಎಂ ಮತ್ತು ಡಿಸಿಎಂ ಜೊತೆ ಮಾತುಕತೆಗೆ ಸಮ್ಮತಿಸಿದ್ದಾರೆ. ಹೀಗಾಗಿ ಜುಲೈ 31ರಂದು ಮತ್ತೆ ದೆಹಲಿಗೆ ತೆರಳುತ್ತಿರುವ ಉಭಯ ನಾಯಕರು ಆಗಸ್ಟ್ ಒಂದರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ.
ಮಾತುಕತೆ ನಂತರ ನಿಗಮ ಮಂಡಳಿ ನೇಮಕ ಮತ್ತು ವಿಧಾನ ಪರಿಷತ್ತಿನ ನಾಲ್ಕು ಸದಸ್ಯರ ನಾಮಕರಣ ಕುರಿತ ಬಿಕ್ಕಟ್ಟು ಇತ್ಯರ್ಥ ಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಉಭಯ ನಾಯಕರು ಅಧಿಕಾರ ಹಸ್ತಾಂತರ, ಮಂತ್ರಿಗಳ ಕಾರ್ಯವೈಖರಿ, ಶಾಸಕರ ಅಸಮಾಧಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದು, ಎಲ್ಲದಕ್ಕೂ ಒಂದು ಸ್ಪಷ್ಟ ಚಿತ್ರಣ ದೊರಕಲಿದೆ ಎನ್ನಲಾಗಿದೆ.




