ಬೆಂಗಳೂರು: ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿ.ವಿ.ನಾಯಕ್ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕತವಾಗಿದೆ. ನಾಮಪತ್ರ ಪರಿಷ್ಕರಣೆ ವೇಳೆ ಬಿ.ವಿ.ನಾಯಕ್ ನಾಮಪತ್ರ ತಿರಸ್ಕೃತಗೊಂಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿಯಿಂದಲೇ ಬಿ.ವಿ.ನಾಯಕ್ ನಾಮಪತ್ರ ಸಲ್ಲಿಸಿದ್ದರಿಂದ ಎ.ಬಿ ಫಾರ್ಮ್ ಇರಲಿಲ್ಲ. ಒಂದು ವೇಳೆ ಫಾರ್ಮ್ ಇಲ್ಲದ ಪಕ್ಷದಲ್ಲಿ 10 ಜನ ಸೂಚಕರು ಇವರ ಪರ ಇರಬೇಕು. ಆದರೆ ಬಿ.ವಿ.ನಾಯಕ್ ಪರ ಒಬ್ಬ ಸೂಚಕ ಮಾತ್ರ ಇದ್ದರು. ಇದೇ ಕಾರಣಕ್ಕೆ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ್ ನಾಯಕ್ ಹೇಳಿದ್ದಾರೆ.
ಬಂಡಾಯ ಅಭ್ಯರ್ಥಿ ಬಿ.ವಿ.ನಾಯಕ್ ನಾಮಪತ್ರ ತಿರಸ್ಕೃತಗೊಂಡಿರುವ ಕಾರಣ, ಬಿಜೆಪಿ ಪಾಳಯ ನಿಟ್ಟುಸಿರು ಬಿಟ್ಟಿದೆ. ಬಿವಿ ನಾಯಕರ ಬಂಡಾಯದಿಂದ ಕ್ಷೇತ್ರದಲ್ಲಿ ನೆಗೆಟಿವ್ ಅಲೆ ಶುರುವಾಗಿತ್ತು. ಆದರೀಗ ನಾಮಪತ್ರ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯಕ್ಕೆ ಮತ್ತಷ್ಟು ಶಕ್ತಿಬಂದಂತಾಗಿದೆ. ಈಗಾಗಲೇ ವರಿಷ್ಠರ ಸಂಧಾನಕ್ಕೆ ಒಪ್ಪಿದ್ದ ಬಿವಿ ನಾಯಕ್ ಇನ್ಮುಂದೆ ಬಿಜೆಪಿ ಪರ ಪ್ರಚಾರಕ್ಕಿಳಿಯುತ್ತಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.




