ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಸೆರೆಮನೆಯಿಂದ ಕಡೆಗೂ ಬಿಡುಗಡೆಯಾಗಿದ್ದಾರೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ಮತ್ತು ವಿನಯ್ಗೆ ನಿನ್ನೆ 24ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಪೊಲೀಸರ ಕೈಗೆ ಬೇಲ್ ಪ್ರತಿ ತಡವಾಗಿ ಸಿಕ್ಕ ಹಿನ್ನೆಲೆಯಲ್ಲಿ ಇಂದು ರಜತ್ ಹಾಗೂ ವಿನಯ್ ಇಂದು ಬಿಡುಗಡೆಯಾದರು. ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಬೆಂಬಲ ನೀಡಿದ್ದಾರೆ ಎಲ್ಲರಿಗೂ ಧನ್ಯವಾದಗಳು ಎಂದು ಚುಟುಕಾಗಿ ಉತ್ತರಿಸಿದರು.
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ರಜತ್, ವಿನಯ್ರನ್ನು ಬಂಧಿಸಲಾಗಿತ್ತು. ಮಾ.26ರಿಂದ ಮಾ.28ರವರೆಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿತ್ತು. ನಿನ್ನೆ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ರಜತ್ ದರ್ಶನ್ ನಟನೆಯ ‘ಕರಿಯ’ ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ದರೆ, ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿ ಇದೀಗ ಬಿಡುಗಡೆಯಾಗಿದ್ದಾರೆ.



