ಬೆಂಗಳೂರು: ಬೆಂಗಳೂರು ಕೆಪಿಸಿಸಿ ಕಛೇರಿಗೆ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ಆಗಮಿಸಿತು. ಈ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಭಾವಚಿತ್ರಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿ ಅಧ್ಯಕ್ಷ ಆರ್.ದೊರೈ, ಉಪಾಧ್ಯಕ್ಷ ರಾಜಣ್ಣ ಅಯ್ಯರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಪ್ಪ ಮತ್ತು ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಇಂಟಕ್ ಅಧ್ಯಕ್ಷ ಲಕ್ಷ್ಮಿವೆಂಕಟೇಶ್, ಮೀನುಗಾರಿಕೆ ಘಟಕದ ಅಧ್ಯಕ್ಷ ಮಂಜುನಾಥ್ ಸುಣಗಾರರವರು ಉಪಸ್ಥಿತರಿದ್ದರು.
ಇದೇ ವೇಳೆ ಮಾತನಾಡಿದ ಜಿ ಸಿ ಚಂದ್ರಶೇಖರ್, ದೇಶದ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಅವಧಿಯ ಆಡಳಿತದಲ್ಲಿ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೇಶದಲ್ಲಿ ಕ್ರಾಂತಿಯಾಯಿತು. ದೇಶ ಅಭಿವೃದ್ದಿಶೀಲ ರಾಷ್ಟ್ರವಾಗಲು ರಾಜೀವ್ ಗಾಂಧಿರವರ ಕೊಡುಗೆ ಅಪಾರ ಎಂದರು.
ರಾಜೀವ್ ಗಾಂಧಿರವರು ಶ್ರೀ ಪೆರಂಬೂರಿನಲ್ಲಿ ಕಾರ್ಯಕ್ರಮದಲ್ಲಿ ಉಗ್ರಗಾಮಿಗಳಿಂದ ಹತ್ಯೆಯಾದರು. ಆಗಸ್ಟ್ 19ರಂದು ರಾಜೀವ್ ಗಾಂಧಿರವರ ಜನ್ಮದಿನಾಚರಣೆ ಪ್ರಯುಕ್ತ ಜ್ಯೋತಿ ಯಾತ್ರೆ ವಿವಿಧ ರಾಜ್ಯಗಳಲ್ಲಿ ಸಾಗಿ ಅಂತಿಮವಾಗಿ ನವದೆಹಲಿ ಸಮಾರೋಪ ನಡೆಯಲಿದೆ. ಶಾಂತಿ, ಸೌಹಾರ್ದತೆ ಸಂಕೇತವಾಗಿ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ನಡೆಯಲಿದೆ ಎಂದರು.




